ರಾಜ್ಯ

ಹುಲಿ ಉಗುರು ಬಳಕೆ | ತಪ್ಪಿತಸ್ಥ ಯಾರೇ ಇರಲಿ ಕಾನೂನಿನಂತೆ ಕ್ರಮ: ಈಶ್ವರ ಖಂಡ್ರೆ

ಕಲಬುರಗಿ : ರಾಜ್ಯದಲ್ಲಿ ಕೆಲವರು ಹುಲಿ ಉಗುರು ಕೊರಳಲ್ಲಿ ಧರಿಸುವುದು, ಹುಲಿ ಚರ್ಮವನ್ನು ಬಳಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಂಬಂಧ ಈಗಾಗಲೇ ಕೆಲವು ಬಂಧನಗಳಾಗಿವೆ. ಇಂತಹ ಪ್ರಕರಣಗಳಲ್ಲಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಕಲಬರುಗಿ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿಯನ್ವಯ ವನ್ಯಜೀವಿಗಳಾದ ಹುಲಿ ಚರ್ಮ, ಉಗುರು, ಆನೆ ದಂತ, ಜಿಂಕೆ ಕೊಂಬು, ಚರ್ಮ ಇತ್ಯಾದಿಯ ಸ್ವಂತಕ್ಕೆ ಬಳಕೆ, ಮಾರಾಟ, ಸಾಗಾಟ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದರು.

ಈ ಹಿಂದೆಯೂ ಪ್ರಾಣಿಗಳನ್ನು ಹತ್ಯೆ ಮಾಡಿ ಅವುಗಳ ಹಲ್ಲು, ಚರ್ಮ, ಕೊಂಬು ಹಾಗೂ ಇತರ ಅಂಗಗಳ ಬಳಕೆ ಮಾಡಿರುವುದು ಬಯಲಾಗಿ ಶಿಕ್ಷೆಗೆ ಒಳಗಾಗಿರುವುದು ಗೊತ್ತೆ ಇರುವ ವಿಚಾರ. ಈಗ ರಾಜ್ಯದಲ್ಲೂ ನಡೆಯುತ್ತಿರುವ ವಿದ್ಯಮಾನಗಳಲ್ಲಿ ಹುಲಿ ಉಗುರು ಬಳಕೆ ಮಾಡಿ ಜನರಲ್ಲಿ ಆಕರ್ಷಣೆ ಉಂಟು ಮಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ಬಂಧನಗಳಾಗಿವೆ. ತಪ್ಪಿತಸ್ಥರ ವಿರುದ್ಧ ನೆಲದ ಕಾನೂನಿನಂತೆ ಕ್ರಮ ಜರುಗುಸಲಾಗುವುದು ಎಂದರು.

ಯಾರೇ ಇರಲಿ ಕಾನೂನಿನಂತೆ ಕ್ರಮ : ಕನ್ನಡ ಚಲನಚಿತ್ರ ನಟ ಸಹಿತ ಸಾರ್ವಜನಿಕವಾಗಿ ಹುಲಿ ಉಗುರು ತೊಟ್ಟು ಆಕ್ಷೇಪಾರ್ಹವಾಗಿ ನಡೆದುಕೊಳ್ಳುವ ಯಾರೇ ಆದರೂ ಕ್ರಮ ಜರುಗಿಸಲು ಅಧಿಕಾರಿಗಳು ಬದ್ಧರಾಗಿದ್ದಾರೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ದೂರು ನೀಡಿದರೆ, ನೆಲದ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು.

ಪ್ರಾಣಿ ಜನ್ಯ ವಸ್ತು ಗಳ ಬಳಕೆ ಸಂಗ್ರಹ, ಸಾಗಾಟ ಮೊದಲಿನಿಂದಲೂ ನಿಷೇಧ ಮಾಡಲಾಗಿದೆ. ಈ ಅಪರಾಧಕ್ಕೆ ಏಳು ವರ್ಷದ ಶಿಕ್ಷೆ ವಿಧಿಸುವ ಅವಕಾಶ ಇದೆ ಎಂದರು.

ಈ ವೇಳೆ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಶರಣಕುಮಾರ ಮೋದಿ ಹಾಗೂ ಉಪಸ್ಥಿತರಿದ್ದರು.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

33 mins ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

35 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

44 mins ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

51 mins ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

60 mins ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

1 hour ago