ರಾಜ್ಯ

ಹುಲಿ ಉಗುರು ಬಳಕೆ | ತಪ್ಪಿತಸ್ಥ ಯಾರೇ ಇರಲಿ ಕಾನೂನಿನಂತೆ ಕ್ರಮ: ಈಶ್ವರ ಖಂಡ್ರೆ

ಕಲಬುರಗಿ : ರಾಜ್ಯದಲ್ಲಿ ಕೆಲವರು ಹುಲಿ ಉಗುರು ಕೊರಳಲ್ಲಿ ಧರಿಸುವುದು, ಹುಲಿ ಚರ್ಮವನ್ನು ಬಳಸುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಂಬಂಧ ಈಗಾಗಲೇ ಕೆಲವು ಬಂಧನಗಳಾಗಿವೆ. ಇಂತಹ ಪ್ರಕರಣಗಳಲ್ಲಿ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಕಲಬರುಗಿ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿಯನ್ವಯ ವನ್ಯಜೀವಿಗಳಾದ ಹುಲಿ ಚರ್ಮ, ಉಗುರು, ಆನೆ ದಂತ, ಜಿಂಕೆ ಕೊಂಬು, ಚರ್ಮ ಇತ್ಯಾದಿಯ ಸ್ವಂತಕ್ಕೆ ಬಳಕೆ, ಮಾರಾಟ, ಸಾಗಾಟ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದರು.

ಈ ಹಿಂದೆಯೂ ಪ್ರಾಣಿಗಳನ್ನು ಹತ್ಯೆ ಮಾಡಿ ಅವುಗಳ ಹಲ್ಲು, ಚರ್ಮ, ಕೊಂಬು ಹಾಗೂ ಇತರ ಅಂಗಗಳ ಬಳಕೆ ಮಾಡಿರುವುದು ಬಯಲಾಗಿ ಶಿಕ್ಷೆಗೆ ಒಳಗಾಗಿರುವುದು ಗೊತ್ತೆ ಇರುವ ವಿಚಾರ. ಈಗ ರಾಜ್ಯದಲ್ಲೂ ನಡೆಯುತ್ತಿರುವ ವಿದ್ಯಮಾನಗಳಲ್ಲಿ ಹುಲಿ ಉಗುರು ಬಳಕೆ ಮಾಡಿ ಜನರಲ್ಲಿ ಆಕರ್ಷಣೆ ಉಂಟು ಮಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ಬಂಧನಗಳಾಗಿವೆ. ತಪ್ಪಿತಸ್ಥರ ವಿರುದ್ಧ ನೆಲದ ಕಾನೂನಿನಂತೆ ಕ್ರಮ ಜರುಗುಸಲಾಗುವುದು ಎಂದರು.

ಯಾರೇ ಇರಲಿ ಕಾನೂನಿನಂತೆ ಕ್ರಮ : ಕನ್ನಡ ಚಲನಚಿತ್ರ ನಟ ಸಹಿತ ಸಾರ್ವಜನಿಕವಾಗಿ ಹುಲಿ ಉಗುರು ತೊಟ್ಟು ಆಕ್ಷೇಪಾರ್ಹವಾಗಿ ನಡೆದುಕೊಳ್ಳುವ ಯಾರೇ ಆದರೂ ಕ್ರಮ ಜರುಗಿಸಲು ಅಧಿಕಾರಿಗಳು ಬದ್ಧರಾಗಿದ್ದಾರೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ದೂರು ನೀಡಿದರೆ, ನೆಲದ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು.

ಪ್ರಾಣಿ ಜನ್ಯ ವಸ್ತು ಗಳ ಬಳಕೆ ಸಂಗ್ರಹ, ಸಾಗಾಟ ಮೊದಲಿನಿಂದಲೂ ನಿಷೇಧ ಮಾಡಲಾಗಿದೆ. ಈ ಅಪರಾಧಕ್ಕೆ ಏಳು ವರ್ಷದ ಶಿಕ್ಷೆ ವಿಧಿಸುವ ಅವಕಾಶ ಇದೆ ಎಂದರು.

ಈ ವೇಳೆ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಶರಣಕುಮಾರ ಮೋದಿ ಹಾಗೂ ಉಪಸ್ಥಿತರಿದ್ದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

20 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

20 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago