ರಾಜ್ಯ

ಯತ್ನಾಳ್‌ ರಕ್ಷಣೆಗೆ ಹಿಂದುತ್ವದ ಗುರಾಣಿ ಬಳಕೆ: ಎಂಪಿ ರೇಣುಕಾಚಾರ್ಯ

ದಾವಣಗೆರೆ: ಬಸನಗೌಡ ಪಾಟೀಲ್‌ ಯತ್ನಾಳ್‌ ತಮ್ಮ ರಕ್ಷಣೆಗಾಗಿ ಹಿಂದುತ್ವ ಎಂಬ ಗುರಾಣಿಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್‌ ಯತ್ನಾಳ್‌ ʼಹಿಂದುತ್ವದ ಹುಲಿʼ ಎಂದು ತಮಗೆ ತಾವೇ ಘೋಷಣೆ ಮಾಡಿಕೊಂಡಿರುವ ನಕಲಿ ಹಿಂದೂ ನಾಯಕ. ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ಅವರ ವಿರುದ್ಧ ಮಾತನಾಡಿ ರಾಜ್ಯಾದ್ಯಾಂತ ಸುದ್ದಿಯಾಗಲು ಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ಸಾಮಾಜಿಕ ಮಾಧ್ಯಮ ಬಳಸಿಕೊಂಡು ಯಡಿಯೂರಪ್ಪ ಕುಟುಂಬದ ವಿರುದ್ಧ ತೇಜೋವಧೆ ಮಾಡಲಾಗುತ್ತಿದೆ. ಯತ್ನಾಳ್‌ ನಿಂದನೆಯಿಂದ ಯಡಿಯೂರಪ್ಪ ಅವರ ಗೌರವ ಕಡಿಮೆ ಆಗುವುದಿಲ್ಲ ಎಂದು ತಿಳಿಸಿದರು.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನೀವು ಚುನಾವಣೆ ಎದುರಿಸಿದರೆ ಠೇವಣಿ ಕೂಡ ಸಿಗುವುದಿಲ್ಲ. ಆದರೂ ಮುಖ್ಯಮಂತ್ರಿ ಆಗುವ ಹಗಲು ಕನಸು ಕಾಣಿತ್ತಿದ್ದೀರಿ ಎಂದು ಕುಟುಕಿದರು.

ಹರಿಹರ ವೀರಶೈವ ಲಿಂಗಾಯತ ಪಂಚಮಶಾಲಿ ಪೀಠದ ಧರ್ಮದರ್ಶಿ ಚಂದ್ರಶೇಖರ ಪೂಜಾರ್‌, ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್‌, ಧನಂಜಯ ಕಡ್ಲೆಬಾಳು, ಎಸ್‌.ಎಂ.ರೇವಣ್ಣಸಿದ್ದಪ್ಪ, ಗದಿಗೆಪ್ಪ, ರಾಜು ವೀರಣ್ಣ, ಚಂದ್ರು ಪಾಟೀಲ್‌ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

19 mins ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

29 mins ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

1 hour ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

3 hours ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

3 hours ago