ದಾವಣಗೆರೆ: ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ರಕ್ಷಣೆಗಾಗಿ ಹಿಂದುತ್ವ ಎಂಬ ಗುರಾಣಿಯನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ʼಹಿಂದುತ್ವದ ಹುಲಿʼ ಎಂದು ತಮಗೆ ತಾವೇ ಘೋಷಣೆ ಮಾಡಿಕೊಂಡಿರುವ ನಕಲಿ ಹಿಂದೂ ನಾಯಕ. ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ಅವರ ವಿರುದ್ಧ ಮಾತನಾಡಿ ರಾಜ್ಯಾದ್ಯಾಂತ ಸುದ್ದಿಯಾಗಲು ಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಸಾಮಾಜಿಕ ಮಾಧ್ಯಮ ಬಳಸಿಕೊಂಡು ಯಡಿಯೂರಪ್ಪ ಕುಟುಂಬದ ವಿರುದ್ಧ ತೇಜೋವಧೆ ಮಾಡಲಾಗುತ್ತಿದೆ. ಯತ್ನಾಳ್ ನಿಂದನೆಯಿಂದ ಯಡಿಯೂರಪ್ಪ ಅವರ ಗೌರವ ಕಡಿಮೆ ಆಗುವುದಿಲ್ಲ ಎಂದು ತಿಳಿಸಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನೀವು ಚುನಾವಣೆ ಎದುರಿಸಿದರೆ ಠೇವಣಿ ಕೂಡ ಸಿಗುವುದಿಲ್ಲ. ಆದರೂ ಮುಖ್ಯಮಂತ್ರಿ ಆಗುವ ಹಗಲು ಕನಸು ಕಾಣಿತ್ತಿದ್ದೀರಿ ಎಂದು ಕುಟುಕಿದರು.
ಹರಿಹರ ವೀರಶೈವ ಲಿಂಗಾಯತ ಪಂಚಮಶಾಲಿ ಪೀಠದ ಧರ್ಮದರ್ಶಿ ಚಂದ್ರಶೇಖರ ಪೂಜಾರ್, ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್, ಧನಂಜಯ ಕಡ್ಲೆಬಾಳು, ಎಸ್.ಎಂ.ರೇವಣ್ಣಸಿದ್ದಪ್ಪ, ಗದಿಗೆಪ್ಪ, ರಾಜು ವೀರಣ್ಣ, ಚಂದ್ರು ಪಾಟೀಲ್ ಹಾಜರಿದ್ದರು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…