ಬೆಂಗಳೂರು : ಮಾಜಿ ಸಚಿವ ಸೋಮಣ್ಣ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದು, ಇತ್ತೀಚೆಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಿದಕ್ಕೆ ಅಸಮಧಾನ ವ್ಯಕ್ತಪಡಿಸಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರು ವಿಚಾರವನ್ನು ಗರುವಾರ ತಳ್ಳಿಹಾಕಿದ್ದಾರೆ.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕ ಸಭಾ ಚುನಾವಣೆ ಸೇರಿದಂತೆ ಬೇರೆ ಯಾವುದೇ ಚುನವಾಣೆಯಲ್ಲಿ ಸ್ಪರ್ಧಿಸುವ ಇಂಗಿತ ನನಗಿಲ್ಲ ಎಂದು ತಿಳಿಸಿದರು.
15 ಸಾವಿರಕ್ಕೂ ಹೆಚ್ಚಿನ ಮಕ್ಕಳ ಶಿಕ್ಷಣಕ್ಕೆ ಕಾರಣವಾಗಿರುವ ಸಿದ್ದಗಂಗಾ ಮಠದ ಯಶಸ್ಸು ಗುರಿತುಸಲು ತುಮಕೂರಿನಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದ್ದೇನೆ. ಈ ಕಾರ್ಯಕ್ರಮದ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವುದಿಲ್ಲ. ಇದರಲ್ಲಿ ರಾಜಕೀಯ ಉದ್ದೇಶವಿಲ್ಲ ಎಂದರು.
ಈ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ ಪರಮೇಶ್ವರ ಅಥವಾ ಇತರ ಕಾಂಗ್ರೆಸ್ ಮುಖಂಡರನ್ನು ಆಹ್ವಾನಿಸಿದರೆ, ತಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದರ್ಥವಲ್ಲ. ಬಿಜೆಪಿಯ ತುಮಕೂರು ಸಂಸದ ಜಿಎಸ್ ಬಸವರಾಜು ಮತ್ತು ಶಾಸಕರಾದ ಜ್ಯೋತಿ ಗಣೇಶ್ ಮತ್ತು ಸುರೇಶ್ ಗೌಡ ಅವರನ್ನೂ ಆಹ್ವಾನಿಸಿದ್ದೇನೆ ಎಂದು ಅವರು ವಿವರಿಸಿದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…