ರಾಜ್ಯ

ವಿವಿಗಳಲ್ಲಿನ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಡಾ.ಸುಧಾಕರ್‌

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಭೋದಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ಹೇಳಿದ್ದಾರೆ.

ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸುಂಕನೂರು ಅವರು, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 70% ಭೊದಕ ಹುದ್ದೆಗಳು ಖಾಲಿ ಇವೆ. ನಿಧನ, ನಿವೃತ್ತಿಯಿಂದ ಖಾಲಿ ಆಗಿರುವ ಹುದ್ದೆಗಳು ಭರ್ತಿ ಆಗಿಲ್ಲ. ಕೂಡಲೇ ಭರ್ತಿ ಮಾಡಬೇಕು. ಹಾಗೆಯೇ ವಿವಿಗಳಲ್ಲಿ ನಿವೃತ್ತಿ ಅಗಿರುವ ನೌಕರರಿಗೆ ಪಿಂಚಣಿ ಹಣವನ್ನು ಸರ್ಕಾರವೇ ಕೊಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಸುಧಾಕರ್‌ ಅವರು, ರಾಜ್ಯದಲ್ಲಿ ಸುಮಾರು 2,800 ಭೋದಕ ಹುದ್ದೆಗಳು ಖಾಲಿ ಇವೆ. ಹಿಂದಿನ ಸರ್ಕಾರಗಳು ಯಾರೂ ನೇಮಕ ಮಾಡಿಲ್ಲ. ನೇಮಕಾತಿ ಸಂಬಂಧ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಕೆಲವೊಂದಕ್ಕೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಿಎಂ ಕೂಡ ಖಾಲಿ ಹುದ್ದೆ ತುಂಬಲು ಒಪ್ಪಿದ್ದಾರೆ. ಹಂತ ಹಂತವಾಗಿ ಖಾಲಿ ಹುದ್ದೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ಕೆಲವು ವಿವಿಗಳಲ್ಲಿ ಅನಗತ್ಯವಾಗಿ ಹುದ್ದೆ ಭರ್ತಿ ಮಾಡಲಾಗಿದೆ. ಈ ಬಗ್ಗೆಯೂ ಪರಿಶೀಲನೆ ನಡೆಸಿ ಆದಷ್ಟು ಬೇಗ ಖಾಲಿ ಹುದ್ದೆ ಭರ್ತಿ ಮಾಡುತ್ತೇವೆ ಎಂದರು.

ವಿವಿ ನಿವೃತ್ತ ನೌಕರರಿಗೆ ಪಿಂಚಣಿ ಕೊಡುವ ವಿಚಾರವಾಗಿ ಪ್ರತಿಕ್ರಿಯಿಸಿ, ನಿವೃತ್ತಿ ನೌಕರರಿಗೆ ಸರ್ಕಾರದಿಂದ 50% ಹಾಗೂ ವಿವಿಯಿಂದ 50% ಸೇರಿ ಪಿಂಚಣಿ ನೀಡಬೇಕು ಎಂಬ ನಿಯಮ ಇದೆ. ವಿವಿಯಿಂದ ಪಿಂಚಣಿ ಹಣ ಸರಿಯಾಗಿ ನೀಡದೆ ಇರುವುದರಿಂದ ಸರ್ಕಾರದ ಮೇಲೆ ಹೊರೆ ಬೀಳುತ್ತಿದೆ. ಈ ವರ್ಷ 91 ಕೋಟಿ ಹಣವನ್ನು ಸರ್ಕಾರ ಪಿಂಚಣಿಗೆ ಕೊಟ್ಟಿದೆ. ಪೂರ್ತಿ ಹಣ ಕೊಡಬೇಕು ಎಂದರೆ ಅದು ಸಾಧ್ಯವಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago