ರಾಜ್ಯ

ವಿವಿಗಳಲ್ಲಿನ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಡಾ.ಸುಧಾಕರ್‌

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಭೋದಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ಹೇಳಿದ್ದಾರೆ.

ವಿಧಾನ ಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸುಂಕನೂರು ಅವರು, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 70% ಭೊದಕ ಹುದ್ದೆಗಳು ಖಾಲಿ ಇವೆ. ನಿಧನ, ನಿವೃತ್ತಿಯಿಂದ ಖಾಲಿ ಆಗಿರುವ ಹುದ್ದೆಗಳು ಭರ್ತಿ ಆಗಿಲ್ಲ. ಕೂಡಲೇ ಭರ್ತಿ ಮಾಡಬೇಕು. ಹಾಗೆಯೇ ವಿವಿಗಳಲ್ಲಿ ನಿವೃತ್ತಿ ಅಗಿರುವ ನೌಕರರಿಗೆ ಪಿಂಚಣಿ ಹಣವನ್ನು ಸರ್ಕಾರವೇ ಕೊಡಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಸುಧಾಕರ್‌ ಅವರು, ರಾಜ್ಯದಲ್ಲಿ ಸುಮಾರು 2,800 ಭೋದಕ ಹುದ್ದೆಗಳು ಖಾಲಿ ಇವೆ. ಹಿಂದಿನ ಸರ್ಕಾರಗಳು ಯಾರೂ ನೇಮಕ ಮಾಡಿಲ್ಲ. ನೇಮಕಾತಿ ಸಂಬಂಧ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಕೆಲವೊಂದಕ್ಕೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಿಎಂ ಕೂಡ ಖಾಲಿ ಹುದ್ದೆ ತುಂಬಲು ಒಪ್ಪಿದ್ದಾರೆ. ಹಂತ ಹಂತವಾಗಿ ಖಾಲಿ ಹುದ್ದೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ಕೆಲವು ವಿವಿಗಳಲ್ಲಿ ಅನಗತ್ಯವಾಗಿ ಹುದ್ದೆ ಭರ್ತಿ ಮಾಡಲಾಗಿದೆ. ಈ ಬಗ್ಗೆಯೂ ಪರಿಶೀಲನೆ ನಡೆಸಿ ಆದಷ್ಟು ಬೇಗ ಖಾಲಿ ಹುದ್ದೆ ಭರ್ತಿ ಮಾಡುತ್ತೇವೆ ಎಂದರು.

ವಿವಿ ನಿವೃತ್ತ ನೌಕರರಿಗೆ ಪಿಂಚಣಿ ಕೊಡುವ ವಿಚಾರವಾಗಿ ಪ್ರತಿಕ್ರಿಯಿಸಿ, ನಿವೃತ್ತಿ ನೌಕರರಿಗೆ ಸರ್ಕಾರದಿಂದ 50% ಹಾಗೂ ವಿವಿಯಿಂದ 50% ಸೇರಿ ಪಿಂಚಣಿ ನೀಡಬೇಕು ಎಂಬ ನಿಯಮ ಇದೆ. ವಿವಿಯಿಂದ ಪಿಂಚಣಿ ಹಣ ಸರಿಯಾಗಿ ನೀಡದೆ ಇರುವುದರಿಂದ ಸರ್ಕಾರದ ಮೇಲೆ ಹೊರೆ ಬೀಳುತ್ತಿದೆ. ಈ ವರ್ಷ 91 ಕೋಟಿ ಹಣವನ್ನು ಸರ್ಕಾರ ಪಿಂಚಣಿಗೆ ಕೊಟ್ಟಿದೆ. ಪೂರ್ತಿ ಹಣ ಕೊಡಬೇಕು ಎಂದರೆ ಅದು ಸಾಧ್ಯವಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago