ರಾಜ್ಯ

ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ನಗರದ ಅರಮನೆ ಮೈದಾನದ ಆವರಣದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಸಮಸ್ತ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರು ಕರ್ನಾಟಕ ಸಾಂಸ್ಕೃತಿಕ ನಾಯಕ ಘೋಷಣೆಯ ವರ್ಷಾಚರಣೆ ಸಂದರ್ಭದಲ್ಲಿ ಒಂದು ತಿಂಗಳ ಕಾಲ ಕನ್ನಡ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣ ಅವರ ಬಗ್ಗೆ ಯಾವುದೇ ವಿಚಾರಗಳಿದ್ದರೂ ಅದಕ್ಕೆ ನಮ ಸರ್ಕಾರ ತಕ್ಷಣ ಸ್ಪಂದಿಸಲಿದೆ ಎಂದರು.

ಇದನ್ನೂ ಓದಿ:-2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಕುಂಟುತ್ತಾ ಸಾಗುತ್ತಿದ್ದು, ಮುಂದಿನ ವರ್ಷದ ವೇಳೆಗೆ ಅದನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.

ಬೆಂಗಳೂರಿನ ನಮ್ಮ ಮೆಟ್ರೊಗೆ ಬಸವಣ್ಣ ಅವರ ಹೆಸರನ್ನು ನಾಮಕರಣ ಮಾಡಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಇದು ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆ. ನಮ್ಮ ಪಾಲು ಶೇ.87ರಷ್ಟಿದೆ, ಕೇಂದ್ರ ಸರ್ಕಾರದ ಪಾಲು ಶೇ.13 ರಷ್ಟಿದೆ. ನಮ್ಮ ಪಾಲು ಹೆಚ್ಚಿದ್ದರೂ, ಯಾವುದೇ ನಿರ್ಣಯ ತೆಗೆದುಕೊಳ್ಳಬೇಕಾದರೆ ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯ. ಪೂರ್ಣ ಪ್ರಮಾಣದಲ್ಲಿ ನಮ್ಮದೇ ಯೋಜನೆಯಾಗಿದ್ದರೆ ಈ ಕ್ಷಣವೇ ನಾನು ಘೋಷಣೆ ಮಾಡುತ್ತಿದ್ದೆ. ಈಗ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

5 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

6 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

6 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

7 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

7 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

8 hours ago