ರಾಜ್ಯ

ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ನಗರದ ಅರಮನೆ ಮೈದಾನದ ಆವರಣದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಸಮಸ್ತ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರು ಕರ್ನಾಟಕ ಸಾಂಸ್ಕೃತಿಕ ನಾಯಕ ಘೋಷಣೆಯ ವರ್ಷಾಚರಣೆ ಸಂದರ್ಭದಲ್ಲಿ ಒಂದು ತಿಂಗಳ ಕಾಲ ಕನ್ನಡ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣ ಅವರ ಬಗ್ಗೆ ಯಾವುದೇ ವಿಚಾರಗಳಿದ್ದರೂ ಅದಕ್ಕೆ ನಮ ಸರ್ಕಾರ ತಕ್ಷಣ ಸ್ಪಂದಿಸಲಿದೆ ಎಂದರು.

ಇದನ್ನೂ ಓದಿ:-2021ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಕುಂಟುತ್ತಾ ಸಾಗುತ್ತಿದ್ದು, ಮುಂದಿನ ವರ್ಷದ ವೇಳೆಗೆ ಅದನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.

ಬೆಂಗಳೂರಿನ ನಮ್ಮ ಮೆಟ್ರೊಗೆ ಬಸವಣ್ಣ ಅವರ ಹೆಸರನ್ನು ನಾಮಕರಣ ಮಾಡಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು, ಇದು ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆ. ನಮ್ಮ ಪಾಲು ಶೇ.87ರಷ್ಟಿದೆ, ಕೇಂದ್ರ ಸರ್ಕಾರದ ಪಾಲು ಶೇ.13 ರಷ್ಟಿದೆ. ನಮ್ಮ ಪಾಲು ಹೆಚ್ಚಿದ್ದರೂ, ಯಾವುದೇ ನಿರ್ಣಯ ತೆಗೆದುಕೊಳ್ಳಬೇಕಾದರೆ ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯ. ಪೂರ್ಣ ಪ್ರಮಾಣದಲ್ಲಿ ನಮ್ಮದೇ ಯೋಜನೆಯಾಗಿದ್ದರೆ ಈ ಕ್ಷಣವೇ ನಾನು ಘೋಷಣೆ ಮಾಡುತ್ತಿದ್ದೆ. ಈಗ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago