ಮೈಸೂರು: ಹಿರಿಯ ಸಾಹಿತಿ, ಬಂಡಾಯಗಾರ ಹಾಗೂ ದಮನಿತರ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ದೇವನೂರು ಮಹದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಣೆ ಮಾಡಿದೆ.
ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಏಳಿಗೆಗಾಗಿ, ಅವರ ಕಲ್ಯಾಣಕ್ಕಾಗಿ ದುಡಿಯುವ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ವರ್ಷ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ವೈಕಂ ಸತ್ಯಾಗ್ರಹ ಶತಮಾನೋತ್ಸವ ಸಂದರ್ಭದಲ್ಲಿ ಈ ಬಗ್ಗೆ ಘೋಷಿಸಿದ್ದರು.
ತಮಿಳುನಾಡಿನ ತಿರುವಾಂಕೂರು ಸಾಮ್ರಾಜ್ಯದಲ್ಲಿ ಹೆಚ್ಚು ದೇವಾಲಯಗಳಿದ್ದು, ಜಾತಿ ವ್ಯವಸ್ಥೆಯ ದಬ್ಬಾಳಿಕೆಗೆ ಹೆಸರುವಾಸಿಯಾಗಿತ್ತು. ಇದರ ವಿರುದ್ಧ ಹಲವಾರು ನಾಯಕರು ಹೋರಾಟ ಮಾಡಿ ಅಶ್ಪೃಶ್ಯರ ಪ್ರವೇಶಾತಿಗಾಗಿ ಒತ್ತಾಯಿಸಿದ್ದರು. ಈ ಕಾರಣದಿಂದ ವೈಕಂ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಚೆಕ್ ಮತ್ತು ಪದಕವನ್ನು ಒಳಗೊಂಡಿರುತ್ತದೆ. ಹಾಗೆಯೇ ಐದು ಲಕ್ಷ ರೂಪಾಯಿ ನಗದು ಪ್ರಶಸ್ತಿ ಪುರಸ್ಕೃತರಿಗೆ ಲಭಿಸಲಿದೆ.
ದೇವನೂರು ಮಹಾದೇವ ಅವರು, ಕುಸುಮ ಬಾಲೆ, ಎದೆಗೆ ಬಿದ್ದ ಅಕ್ಷರ, ಆರ್ಎಸ್ಎಸ್ ಆಳ ಮತ್ತು ಅಗಲ, ಒಡಲಾಳ ಪುಸ್ತಕಗಳನ್ನು ಬರೆದಿದ್ದಾರೆ. ಕುಸುಮ ಬಾಲೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ, ಪದ್ಮಶ್ರೀ ಪ್ರಶಸ್ತಿಗಳು ಲಭಿಸಿವೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…