ಮೈಸೂರು: ಹಿರಿಯ ಸಾಹಿತಿ, ಬಂಡಾಯಗಾರ ಹಾಗೂ ದಮನಿತರ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ದೇವನೂರು ಮಹದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಣೆ ಮಾಡಿದೆ.
ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಏಳಿಗೆಗಾಗಿ, ಅವರ ಕಲ್ಯಾಣಕ್ಕಾಗಿ ದುಡಿಯುವ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ವರ್ಷ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ವೈಕಂ ಸತ್ಯಾಗ್ರಹ ಶತಮಾನೋತ್ಸವ ಸಂದರ್ಭದಲ್ಲಿ ಈ ಬಗ್ಗೆ ಘೋಷಿಸಿದ್ದರು.
ತಮಿಳುನಾಡಿನ ತಿರುವಾಂಕೂರು ಸಾಮ್ರಾಜ್ಯದಲ್ಲಿ ಹೆಚ್ಚು ದೇವಾಲಯಗಳಿದ್ದು, ಜಾತಿ ವ್ಯವಸ್ಥೆಯ ದಬ್ಬಾಳಿಕೆಗೆ ಹೆಸರುವಾಸಿಯಾಗಿತ್ತು. ಇದರ ವಿರುದ್ಧ ಹಲವಾರು ನಾಯಕರು ಹೋರಾಟ ಮಾಡಿ ಅಶ್ಪೃಶ್ಯರ ಪ್ರವೇಶಾತಿಗಾಗಿ ಒತ್ತಾಯಿಸಿದ್ದರು. ಈ ಕಾರಣದಿಂದ ವೈಕಂ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಚೆಕ್ ಮತ್ತು ಪದಕವನ್ನು ಒಳಗೊಂಡಿರುತ್ತದೆ. ಹಾಗೆಯೇ ಐದು ಲಕ್ಷ ರೂಪಾಯಿ ನಗದು ಪ್ರಶಸ್ತಿ ಪುರಸ್ಕೃತರಿಗೆ ಲಭಿಸಲಿದೆ.
ದೇವನೂರು ಮಹಾದೇವ ಅವರು, ಕುಸುಮ ಬಾಲೆ, ಎದೆಗೆ ಬಿದ್ದ ಅಕ್ಷರ, ಆರ್ಎಸ್ಎಸ್ ಆಳ ಮತ್ತು ಅಗಲ, ಒಡಲಾಳ ಪುಸ್ತಕಗಳನ್ನು ಬರೆದಿದ್ದಾರೆ. ಕುಸುಮ ಬಾಲೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ, ಪದ್ಮಶ್ರೀ ಪ್ರಶಸ್ತಿಗಳು ಲಭಿಸಿವೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…