ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.
ಈ ಹಿನ್ನೆಲೆಯಲ್ಲಿ ಭಕ್ತರು ದೇವಾಲಯಗಳಿಗೆ ತೆರಳಿ ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ.
ವರ್ಷದ ಕೊನೆಯ ವೈಕುಂಠ ಏಕಾದಶಿ ಆಚರಣೆ ನಡೆದಿದ್ದು, ವೆಂಕಟೇಶ್ವರ, ಶ್ರೀನಿವಾಸ ದೇವಾಲಯಗಳು ಸೇರಿದಂತೆ ಬಹುತೇಕ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಲಂಕಾರ ಮಾಡಲಾಗಿದೆ. ಅಪಾರ ಭಕ್ತರು ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ತಿರುಪತಿ ವೆಂಕಟೇಶ್ವರನಿಗೆ ವಿಶೇಷ ಪೂಜೆ ನೆರವೇರಿಸಲಾಗಿದ್ದು, ಗೋವಿಂದ ನಾಮ ಸ್ಮರಣೆ ಮುಗಿಲು ಮುಟ್ಟಿದೆ.
ದೇಶಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿದ್ದು, ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…