ರಾಜ್ಯ

ಸದನದಲ್ಲಿ ಸದ್ದು ಮಾಡಿದ ವಾಲ್ಮೀಕಿ ಹಗರಣ ; ಸರ್ಕಾರ-ವಿಪಕ್ಷ ನಾಯಕರ ನಡುವೆ ವಾಕ್ಸಮರ

ಬೆಂಗಳೂರು : ಮುಂಗಾರು ಅಧಿವೇಶನದ ೨ನೇ ದಿನವಾದ ಇಂದು ಸಹ ಸದನದಲ್ಲಿ ವಾಲ್ಮೀಕಿ ನಿಗಮದ ಹಗರಣ ಸಾಕಷ್ಟು ಸದ್ದು ಮಾಡಿದೆ. ಅಲ್ಲದೆ ಸರ್ಕಾರ ಹಾಗೂ ವಿಪಕ್ಷ ನಾಯಕರ ನಡುವೆ ಜಟಾಪಟಿ ತಾರಕಕ್ಕೇರಿತು.

ಬಿಜೆಪಿಯ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಮಾತನಾಡಿ, ಸದನದಲ್ಲಿ ಕಾಂಗ್ರೆಸ್‌ ನವರು ಯಾರು ಇಲ್ಲ. ಸಿಎಂ ಇಲ್ಲ. ಸಚಿವರು ಇಲ್ಲ. ಖುದ್ದು ಸಿಎಂ ಮೇಲೆ ಆರೋಪವಿದೆ. ಆದರೆ ಇದರ ಚರ್ಚೆ ವೇಳೆ ಸಿಎಂ ಇಲ್ಲ. ಇದೇನಾ ಅವರ ಜವಾಬ್ದಾರಿ..? ಸದನ ನಡೀತಿದೆ, ಸದನಕ್ಕೆ ಬರಲು ಸಿಎಂ ಸಿದ್ದರಾಮಯ್ಯಗೆ ಪುರುಸೊತ್ತಿಲ್ವಾ..? ಕರೆಸಿ ಸಿಎಂನಾ ಎಂದು ಕಿಡಿಕಾರಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಡಿಸಿಎಂ ಡಿ‌.ಕೆ ಶಿವಕುಮಾರ್, ಹೌದು ನೀವಯ ಲೂಟಿ ಮಾಡಿದ್ದಕ್ಕೆ ಜನ ನಮ್ಮನ್ನ ಇಲ್ಲಿ ಕೂರಿಸಿರೋದು. ನೀವು ಮಾಡಬಾರದ ಲೂಟಿ ಮಾಡಿದ್ದಕ್ಕೆ ನಿಮ್ಮನ್ನ ಜನ ಅಲ್ಲಿ ಕೂರಿಸಿರೋದು. ನೀನು ಲೂಟಿ ಮಾಡುವವರ ಪಿತಾಮಹ ಎಂದು  ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಬಳಿಕ ಡಿಸಿಎಂ ನನ್ನ ಹೆಸರು ಹೇಳಿ ಆರೋಪ ಮಾಡಿದ್ದಾರೆ. ಹಿಟ್‌ ಅಂಡ್‌ ರನ್‌ ಹೇಳಿಕೆ ಕೊಟ್ಟಿದ್ದಾರೆ. ನಾನು ಮಾಡಬಾರದ್ದು ಏನು ಮಾಡಿದ್ದೀನಿ ಅಂತಾ ಡಿಕೆಶಿ ಹೇಳಬೇಕು. ನಾವು ನಿಮ್ಮ ಹಾಗೆ ಓಡಿ ಹೋಗಲ್ಲ, ಇಲ್ಲೇ ಇರ್ತೇವೆ. ಡಿ.ಕೆ ಶಿವಕುಮಾರ್‌ ಕ್ಷಮೆ ಕೇಳಬೇಕು ಎಂದು ಅಶ್ವಥ್‌ ನಾರಾಯಣ್‌ ಸೇರಿ ಬಿಜೆಪಿ ಶಾಸಕರು ಪಟ್ಟು ಹಿಡಿದರು. ಆಡಳಿತ ಹಾಗೂ ವಿಪಕ್ಷಗಳ ನಡುವೆ ಗದ್ದಲ ಉಂಟಾಯಿತು.

ನಂತರ ನಿಗಮದ ಅಕ್ರಮ ಪ್ರಕರಣ ಕುರಿತು ವಿಪಕ್ಷ ನಾಯಕ ಆರ್‌ ಅಶೋಕ್‌ ಮಾತನಾಡಿ, ಸಿಎಂ ಅವರು ೧೮೭ ಕೋಟಿ ಅಕ್ರಮ ವರ್ಗಾವಣೆ ಆಗಿಲ್ಲ ಆಗಿರೋದು ೮೯.೬೨ ಕೋಟಿ ಅಂದರು. ಅಲ್ಲಿಗೆ ಅಕ್ರಮ ಆಗಿರೋದನ್ನ ಸಿಎಂ ಒಪ್ಪಿಕೊಂಡ ಹಾಗಾಯ್ತಲ್ಲ. ಕಳವು ಮಾಡಲು ೧೮೭ ಕೋಟಿ ವರ್ಗಾವಣೆ ಮಾಡಿದ್ರೆ ಹಗರಣ ಸಹ ೧೮೭ ಕೋಟಿ ಅಷ್ಟೇ ಆಗಿದೆ ಅಂತರ್ಥ. ಸಿಎಂ ೮೯.೬೩ ಕೋಟಿ ಅಂತ ಹೇಗೇ ಹೇಳುತ್ತಾರೆ. ಇದು ಪಕ್ಕಾ ೧೮೭ ಕೋಟಿ ಅಕ್ರಮನೇ. ಈ ಕಳ್ಳತನ ಸಿಎಂ ಗೊತ್ತು ಅಂದ್ರು, ಗೊತ್ತಿಲ್ಲ ಅಂದ್ರು ಅವರದ್ದೇ ತಪ್ಪು . ಯಾಕಂದ್ರೆ ಸಿಎಂ ಅವರೇ ಯಜಮಾನರು ಎಂದು ಆರೋಪಿಸಿದರು.

ಅಲ್ಲದೆ ಈ ವಾಲ್ಮೀಕಿ ಪ್ರಕರಣದಲ್ಲಿ ಎಸ್‌ ಐಟಿ ವಿಫಲ ಆಗಿದೆ. ಈ ಪ್ರಕರಣದಲ್ಲಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ.  ಅವರ ಶಾಪ ಸರ್ಕಾರಕ್ಕೆ ತಟ್ಟಬಾರದು ಅಂದರೆ ೧೮೭ ಕೋಟಿ ವಾಪಸ್‌ ಪಡೆಯಿರಿ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಸಿಎಂ ನೈತಿಕ ಹೊಣೆ ಹೊತ್ತುರಾಜೀನಾಮೆ ಕೊಡಬೇಕು ಎಂದು ಅಶೋಕ್‌ ಆಗ್ರಹಿಸಿದರು. ಬಿಜೆಪಿ ಸದಸ್ಯರು ಮೇಜು ಕುಟ್ಟಿ ಸ್ವಾಗತಿಸಿದರು. ಇದಕ್ಕೆ ಕಾಂಗ್ರೆಸ್‌ ನವರು ಆಕ್ಷೇಪ ವ್ಯಕ್ತಪಡಿಸಿದರು. ಸದನದಲ್ಲಿ ಮತ್ತೆ ಗದ್ದಲ ಶುರುವಾಗಿ ವಾಕ್ಸಮರ ತಾರಕಕ್ಕೇರಿತು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago