ಬೆಂಗಳೂರು: ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಮತ್ತೊಂದು ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಅಕ್ರಮಗಳನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಮುಂದಿನ ಕೆಲವು ವಾರಗಳಲ್ಲಿ ಬಳ್ಳಾರಿಯಲ್ಲಿ ಈ ರ್ಯಾಲಿ ನಡೆಸುತ್ತೇವೆ. ಬಳ್ಳಾರಿ ಭಾಗದಲ್ಲಿ ಮತ್ತೊಮ್ಮೆ ಪಾದಯಾತ್ರೆ ನಡೆಸಲು ಬಿಜೆಪಿ ಉತ್ಸುಕವಾಗಿದೆ ಎಂದು ಹೇಳಿದರು.
ನಮಗೆ ಬೀದರ್ನಿಂದ ಬಳ್ಳಾರಿಗೆ ಅಥವಾ ಬಳ್ಳಾರಿಯಿಂದ ಚಿತ್ರದುರ್ಗಕ್ಕೆ ಪಾದಯಾತ್ರೆ ನಡೆಸಬೇಕು. ಅದನ್ನು ಅಂತಿಮಗೊಳಿಸುವ ಮೊದಲು ದೆಹಲಿಯಲ್ಲಿ ನಮ್ಮ ನಾಯಕರೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ಇತ್ತೀಚೆಗೆ ಯಾದಗಿರಿಯಲ್ಲಿ ನಡೆದ ಪಿಎಸ್ಐ ಪರಶುರಾಮ್ ಆತ್ಮಹತ್ಯೆ ಪ್ರಕರಣ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿವೆ. ಈ ಎಲ್ಲಾ ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ. ಸರ್ಕಾರ ಬಂದ ಮೇಲೆ ಹಗರಣಗಳು ಜಾಸ್ತಿಯಾಗಿವೆ. ಅಭಿವೃದ್ಧಿ ಕೆಲಸಗಳು ಒಂದೂ ಆಗುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ನಿಂತು ಹೋಗಿವೆ. ರಾಜ್ಯದ ಜನರ ಜೀವದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ. ಅದಕ್ಕಾಗಿಯೇ ನಾವು ಪಾದಯಾತ್ರೆ ಕೈಗೊಂಡು ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…
ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…
ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…
ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…