ರಾಜ್ಯ

ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ವಾಲ್ಮೀಕಿ ಹಗರಣ ಖಂಡಿಸಿ ಬಳ್ಳಾರಿ ಪಾದಯಾತ್ರೆ

ಬೆಂಗಳೂರು: ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಮತ್ತೊಂದು ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಅಕ್ರಮಗಳನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಮುಂದಿನ ಕೆಲವು ವಾರಗಳಲ್ಲಿ ಬಳ್ಳಾರಿಯಲ್ಲಿ ಈ ರ್ಯಾಲಿ ನಡೆಸುತ್ತೇವೆ. ಬಳ್ಳಾರಿ ಭಾಗದಲ್ಲಿ ಮತ್ತೊಮ್ಮೆ ಪಾದಯಾತ್ರೆ ನಡೆಸಲು ಬಿಜೆಪಿ ಉತ್ಸುಕವಾಗಿದೆ ಎಂದು ಹೇಳಿದರು.

ನಮಗೆ ಬೀದರ್‌ನಿಂದ ಬಳ್ಳಾರಿಗೆ ಅಥವಾ ಬಳ್ಳಾರಿಯಿಂದ ಚಿತ್ರದುರ್ಗಕ್ಕೆ ಪಾದಯಾತ್ರೆ ನಡೆಸಬೇಕು. ಅದನ್ನು ಅಂತಿಮಗೊಳಿಸುವ ಮೊದಲು ದೆಹಲಿಯಲ್ಲಿ ನಮ್ಮ ನಾಯಕರೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.

ಇತ್ತೀಚೆಗೆ ಯಾದಗಿರಿಯಲ್ಲಿ ನಡೆದ ಪಿಎಸ್‌ಐ ಪರಶುರಾಮ್‌ ಆತ್ಮಹತ್ಯೆ ಪ್ರಕರಣ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿವೆ. ಈ ಎಲ್ಲಾ ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ. ಸರ್ಕಾರ ಬಂದ ಮೇಲೆ ಹಗರಣಗಳು ಜಾಸ್ತಿಯಾಗಿವೆ. ಅಭಿವೃದ್ಧಿ ಕೆಲಸಗಳು ಒಂದೂ ಆಗುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ನಿಂತು ಹೋಗಿವೆ. ರಾಜ್ಯದ ಜನರ ಜೀವದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ. ಅದಕ್ಕಾಗಿಯೇ ನಾವು ಪಾದಯಾತ್ರೆ ಕೈಗೊಂಡು ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

11 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

11 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

12 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

12 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

12 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

13 hours ago