ಬೆಂಗಳೂರು: ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಬಿಜೆಪಿ ಮತ್ತೊಂದು ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಸಚಿವ ಶ್ರೀರಾಮುಲು ಅವರು, ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಅಕ್ರಮಗಳನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ ಮುಂದಿನ ಕೆಲವು ವಾರಗಳಲ್ಲಿ ಬಳ್ಳಾರಿಯಲ್ಲಿ ಈ ರ್ಯಾಲಿ ನಡೆಸುತ್ತೇವೆ. ಬಳ್ಳಾರಿ ಭಾಗದಲ್ಲಿ ಮತ್ತೊಮ್ಮೆ ಪಾದಯಾತ್ರೆ ನಡೆಸಲು ಬಿಜೆಪಿ ಉತ್ಸುಕವಾಗಿದೆ ಎಂದು ಹೇಳಿದರು.
ನಮಗೆ ಬೀದರ್ನಿಂದ ಬಳ್ಳಾರಿಗೆ ಅಥವಾ ಬಳ್ಳಾರಿಯಿಂದ ಚಿತ್ರದುರ್ಗಕ್ಕೆ ಪಾದಯಾತ್ರೆ ನಡೆಸಬೇಕು. ಅದನ್ನು ಅಂತಿಮಗೊಳಿಸುವ ಮೊದಲು ದೆಹಲಿಯಲ್ಲಿ ನಮ್ಮ ನಾಯಕರೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.
ಇತ್ತೀಚೆಗೆ ಯಾದಗಿರಿಯಲ್ಲಿ ನಡೆದ ಪಿಎಸ್ಐ ಪರಶುರಾಮ್ ಆತ್ಮಹತ್ಯೆ ಪ್ರಕರಣ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿವೆ. ಈ ಎಲ್ಲಾ ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ. ಸರ್ಕಾರ ಬಂದ ಮೇಲೆ ಹಗರಣಗಳು ಜಾಸ್ತಿಯಾಗಿವೆ. ಅಭಿವೃದ್ಧಿ ಕೆಲಸಗಳು ಒಂದೂ ಆಗುತ್ತಿಲ್ಲ ಎಂದು ಗಂಭೀರ ಆರೋಪ ಮಾಡಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಎಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳು ನಿಂತು ಹೋಗಿವೆ. ರಾಜ್ಯದ ಜನರ ಜೀವದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ. ಅದಕ್ಕಾಗಿಯೇ ನಾವು ಪಾದಯಾತ್ರೆ ಕೈಗೊಂಡು ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…