ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಳ್ಳಾರಿ ಅಭ್ಯರ್ಥಿ ಬಿ.ನಾಗೇಂದ್ರ ಅವರೇ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ವೈಯಕ್ತಿಕ ಖರ್ಚು ವೆಚ್ಚಕ್ಕೆ ಬಳಸಿದ್ದಾರೆ ಎಂದು ಇ.ಡಿ. ಚಾರ್ಚ್ಶೀಟ್ನಲ್ಲಿ ವರದಿ ಮಾಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮವೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಇದರಲ್ಲಿ ಹಲವು ವಿಚಾರಗಳ ಬಗ್ಗೆ ಬಹಿರಂಗವಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ಪ್ರಕರಣದ ಬಗ್ಗೆ ಇ.ಡಿ.ಯೂ ತನಿಖೆ ನಡೆಸಿದ್ದು, ಸುಮಾರು 187 ಕೋಟಿ ರೂಪಾಯಿಗಳಷ್ಟು ಹಗರಣ ನಡೆದಿದೆ.
ಅಲ್ಲದೇ ಪ್ರಕರಣದಲ್ಲಿ ಬಿ.ನಾಗೇಂದ್ರ ಅವರೇ ಪ್ರಮುಖ ಆರೋಪಿಯಾಗಿದ್ದು, ಹೈದರಾಬಾದ್ ಫಸ್ಟ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ್, ಬ್ಯಾಂಕ್ ಅಧ್ಯಕ್ಷ ಇಟಕಾರಿ ಸತ್ಯನಾರಾಯಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಜೆ.ಜೆ.ಪದ್ಮನಾಭ, ಸಹಚರರರಾದ ನಾಗೇಶ್ವರ ರಾವ್, ನೆಕ್ಕುಂಟಿ ನಾಗರಾಜ್ ಮತ್ತು ವಿಜಯ್ ಕುಮಾರ್ ಗೌಡ ಸೇರಿದಂತೆ 24 ಆರೋಪಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿ ನಾಗೇಂದ್ರ ಅವರ ಮೊಬೈಲ್ ಹಾಗೂ ಆವರ ಆಪ್ತ ವಿಜಯ್ ಕುಮಾರ್ ಅವರ ಮೊಬೈಲ್ನ್ನು ವಶಕ್ಕೆ ಪಡೆದು ರಿಟ್ರೀವ್ ಮಾಡಲಾಗಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಅವ್ಯವಹಾರ ಹಣ ಹಂಚಿಕೆಯಾಗಿರುವುದು ಬೆಳಕಿಗೆ ಬಂದಿದೆ.
ಅಲ್ಲದೇ, ಬಳ್ಳಾರಿ ಲೋಕಸಭಾ ಚುನಾವಣೆಗಾಗಿ 20.19 ಕೋಟಿ ರೂ. ವೆಚ್ಚ ಮಾಡಿದ್ದರೂ ಸಹ ನಾಗೇಂದ್ರ ಅವರು, ವೈಯಕ್ತಿಕ ಖರ್ಚಿಗೆ ಹಣವನ್ನು ದುರ್ಬಳಕೆ ಮಾಡಿದ್ದಾರೆ.
ಆರೋಪಿ ನಾಗೇಂದ್ರ ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ ಬೆಳಕಿಗೆ ಬರುತ್ತಿದ್ದಂತೆ ಮೊಬೈಲ್ ನಾಶ ಪಡಿಸುವ ಕಾರ್ಯ ನಡೆದಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸತ್ಯ ಬಾಯಿಬಿಡದಂತೆ ಬೆದರಿಕೆ ಹಾಕಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…