ರಾಜ್ಯ

ವಾಲ್ಮೀಕಿ ಅಭಿವೃಧ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಮುಖ್ಯ ಆರೋಪಿ

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಳ್ಳಾರಿ ಅಭ್ಯರ್ಥಿ ಬಿ.ನಾಗೇಂದ್ರ ಅವರೇ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ವೈಯಕ್ತಿಕ ಖರ್ಚು ವೆಚ್ಚಕ್ಕೆ ಬಳಸಿದ್ದಾರೆ ಎಂದು ಇ.ಡಿ. ಚಾರ್ಚ್‌ಶೀಟ್‌ನಲ್ಲಿ ವರದಿ ಮಾಡಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮವೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಇದರಲ್ಲಿ ಹಲವು ವಿಚಾರಗಳ ಬಗ್ಗೆ ಬಹಿರಂಗವಾಗಿ ಪ್ರಕಟಣೆಯಲ್ಲಿ ತಿಳಿಸಿದೆ. ಈ ಪ್ರಕರಣದ ಬಗ್ಗೆ ಇ.ಡಿ.ಯೂ ತನಿಖೆ ನಡೆಸಿದ್ದು, ಸುಮಾರು 187 ಕೋಟಿ ರೂಪಾಯಿಗಳಷ್ಟು ಹಗರಣ ನಡೆದಿದೆ.

ಅಲ್ಲದೇ ಪ್ರಕರಣದಲ್ಲಿ ಬಿ.ನಾಗೇಂದ್ರ ಅವರೇ ಪ್ರಮುಖ ಆರೋಪಿಯಾಗಿದ್ದು, ಹೈದರಾಬಾದ್‌ ಫಸ್ಟ್‌ ಕ್ರೆಡಿಟ್‌ ಕೋ ಆಪರೇಟಿವ್‌ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಸತ್ಯನಾರಾಯಣ್‌, ಬ್ಯಾಂಕ್‌ ಅಧ್ಯಕ್ಷ ಇಟಕಾರಿ ಸತ್ಯನಾರಾಯಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಜೆ.ಜೆ.ಪದ್ಮನಾಭ, ಸಹಚರರರಾದ ನಾಗೇಶ್ವರ ರಾವ್‌, ನೆಕ್ಕುಂಟಿ ನಾಗರಾಜ್‌ ಮತ್ತು ವಿಜಯ್‌ ಕುಮಾರ್‌ ಗೌಡ ಸೇರಿದಂತೆ 24 ಆರೋಪಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿ ನಾಗೇಂದ್ರ ಅವರ ಮೊಬೈಲ್‌ ಹಾಗೂ ಆವರ ಆಪ್ತ ವಿಜಯ್‌ ಕುಮಾರ್‌ ಅವರ ಮೊಬೈಲ್‌ನ್ನು ವಶಕ್ಕೆ ಪಡೆದು ರಿಟ್ರೀವ್‌ ಮಾಡಲಾಗಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಅವ್ಯವಹಾರ ಹಣ ಹಂಚಿಕೆಯಾಗಿರುವುದು ಬೆಳಕಿಗೆ ಬಂದಿದೆ.

ಅಲ್ಲದೇ, ಬಳ್ಳಾರಿ ಲೋಕಸಭಾ ಚುನಾವಣೆಗಾಗಿ 20.19 ಕೋಟಿ ರೂ. ವೆಚ್ಚ ಮಾಡಿದ್ದರೂ ಸಹ ನಾಗೇಂದ್ರ ಅವರು, ವೈಯಕ್ತಿಕ ಖರ್ಚಿಗೆ ಹಣವನ್ನು ದುರ್ಬಳಕೆ ಮಾಡಿದ್ದಾರೆ.

ಆರೋಪಿ ನಾಗೇಂದ್ರ ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ ಬೆಳಕಿಗೆ ಬರುತ್ತಿದ್ದಂತೆ ಮೊಬೈಲ್‌ ನಾಶ ಪಡಿಸುವ ಕಾರ್ಯ ನಡೆದಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸತ್ಯ ಬಾಯಿಬಿಡದಂತೆ ಬೆದರಿಕೆ ಹಾಕಲಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

34 mins ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

35 mins ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

37 mins ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

42 mins ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

4 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

4 hours ago