ರಾಜ್ಯ

ವಾಲ್ಮೀಕಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಲಾಗಿದೆ: ಇ.ಡಿ ಅಧಿಕಾರಿಗಳ ಸ್ಪಷ್ಟನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ವಿಜಯ್‌ ಕುಮಾರ್‌ ಗೌಡ ಮೊಬೈಲ್‌ನ ಸ್ಕ್ರೀನ್‌ಶಾಟ್‌ ಫೋಟೋಗಳ ಮೂಲಕ ಮತ್ತು ಫೋನಿನ ಅನೇಕ ಸಂಭಾಷಣೆಗಳ ಮೂಲಕ ತಿಳಿಯುತ್ತದೆ ಎಂದು ಇ.ಡಿ ಸ್ಪಷ್ಟನೆ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್‌ಕುಮಾರ್‌ ಗೌಡರ ಹೇಳಿಕೆಯನ್ನು ಉಲ್ಲೇಖಿಸಿದ ಇ.ಡಿ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಆರೋಪಿ ಬಿ.ನಾಗೇಂದ್ರ ಅವರ ಜಾಮೀನು ಅರ್ಜಿಗೆ ತನ್ನ ಆಕ್ಷೇಪಣೆ ವ್ಯಕ್ತಪಡಿಸಿದೆ.

ಅಲ್ಲದೇ, ಚುನಾವಣೆಗೆ ಬೇಕಾದ ಹಣವನ್ನು ವರ್ಗಾಯಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮುಖಾಂತರ ಮೋಸದ ಚಟುವಟಿಕೆ ರೂಪಿಸುವಲ್ಲಿ ನಾಗೇಂದ್ರ ಮುಖ್ಯ ಪಾತ್ರ ವಹಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಚುನಾವಣೆಯ ಸಂದರ್ಭದಲ್ಲಿ ನಗದು ನಿರ್ವಹಣೆಯ ಜೊತೆಗೆ ವೈಯಕ್ತಿಕ ಹಾಗೂ ಚುನಾವಣಾ ವೆಚ್ಚಗಳಿಗೆ ಬಳಸಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ.

ಈ ನಿಗಮದ ಹಣವನ್ನು ನಿರ್ವಹಣೆ ಮಾಡುವ ಕಾರ್ಯದಲ್ಲಿ ವಿಜಯ್‌ ಕುಮಾರ್‌ ಗೌಡ ವಹಿಸಿಕೊಂಡಿದ್ದು, ಆರೋಪಿ ನೆಕ್ಕುಂಟಿ ನಾಗರಾಜ್‌ ಸಲಹೆಯ ಮೇರೆಗೆ ಮತ್ತೋರ್ವ ಆರೋಪಿ ಎಡರು ರುದ್ರಯ್ಯನಿಗೆ ಆರೋಪಿ ವಿಜಯ್‌ ಎಂಬಾತ 61 ಕೋಟಿ ರೂಗಳನ್ನು ನೀಡಿದ್ದಾನೆ ಎಂದು ವರದಿ ಮಾಡಲಾಗಿದೆ.

 

 

ಅರ್ಚನ ಎಸ್‌ ಎಸ್

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

8 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

8 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

8 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

9 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

10 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

10 hours ago