ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ವಿಜಯ್ ಕುಮಾರ್ ಗೌಡ ಮೊಬೈಲ್ನ ಸ್ಕ್ರೀನ್ಶಾಟ್ ಫೋಟೋಗಳ ಮೂಲಕ ಮತ್ತು ಫೋನಿನ ಅನೇಕ ಸಂಭಾಷಣೆಗಳ ಮೂಲಕ ತಿಳಿಯುತ್ತದೆ ಎಂದು ಇ.ಡಿ ಸ್ಪಷ್ಟನೆ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ಕುಮಾರ್ ಗೌಡರ ಹೇಳಿಕೆಯನ್ನು ಉಲ್ಲೇಖಿಸಿದ ಇ.ಡಿ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಆರೋಪಿ ಬಿ.ನಾಗೇಂದ್ರ ಅವರ ಜಾಮೀನು ಅರ್ಜಿಗೆ ತನ್ನ ಆಕ್ಷೇಪಣೆ ವ್ಯಕ್ತಪಡಿಸಿದೆ.
ಅಲ್ಲದೇ, ಚುನಾವಣೆಗೆ ಬೇಕಾದ ಹಣವನ್ನು ವರ್ಗಾಯಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮುಖಾಂತರ ಮೋಸದ ಚಟುವಟಿಕೆ ರೂಪಿಸುವಲ್ಲಿ ನಾಗೇಂದ್ರ ಮುಖ್ಯ ಪಾತ್ರ ವಹಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಚುನಾವಣೆಯ ಸಂದರ್ಭದಲ್ಲಿ ನಗದು ನಿರ್ವಹಣೆಯ ಜೊತೆಗೆ ವೈಯಕ್ತಿಕ ಹಾಗೂ ಚುನಾವಣಾ ವೆಚ್ಚಗಳಿಗೆ ಬಳಸಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ.
ಈ ನಿಗಮದ ಹಣವನ್ನು ನಿರ್ವಹಣೆ ಮಾಡುವ ಕಾರ್ಯದಲ್ಲಿ ವಿಜಯ್ ಕುಮಾರ್ ಗೌಡ ವಹಿಸಿಕೊಂಡಿದ್ದು, ಆರೋಪಿ ನೆಕ್ಕುಂಟಿ ನಾಗರಾಜ್ ಸಲಹೆಯ ಮೇರೆಗೆ ಮತ್ತೋರ್ವ ಆರೋಪಿ ಎಡರು ರುದ್ರಯ್ಯನಿಗೆ ಆರೋಪಿ ವಿಜಯ್ ಎಂಬಾತ 61 ಕೋಟಿ ರೂಗಳನ್ನು ನೀಡಿದ್ದಾನೆ ಎಂದು ವರದಿ ಮಾಡಲಾಗಿದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…