ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಮಾಜಿ ಸಚಿವ ಬಿ.ನಾಗೇಂದ್ರ ಅವರ ಆಪ್ತ ಸಹಾಯಕ ವಿಜಯ್ ಕುಮಾರ್ ಗೌಡ ಮೊಬೈಲ್ನ ಸ್ಕ್ರೀನ್ಶಾಟ್ ಫೋಟೋಗಳ ಮೂಲಕ ಮತ್ತು ಫೋನಿನ ಅನೇಕ ಸಂಭಾಷಣೆಗಳ ಮೂಲಕ ತಿಳಿಯುತ್ತದೆ ಎಂದು ಇ.ಡಿ ಸ್ಪಷ್ಟನೆ ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ಕುಮಾರ್ ಗೌಡರ ಹೇಳಿಕೆಯನ್ನು ಉಲ್ಲೇಖಿಸಿದ ಇ.ಡಿ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಆರೋಪಿ ಬಿ.ನಾಗೇಂದ್ರ ಅವರ ಜಾಮೀನು ಅರ್ಜಿಗೆ ತನ್ನ ಆಕ್ಷೇಪಣೆ ವ್ಯಕ್ತಪಡಿಸಿದೆ.
ಅಲ್ಲದೇ, ಚುನಾವಣೆಗೆ ಬೇಕಾದ ಹಣವನ್ನು ವರ್ಗಾಯಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮುಖಾಂತರ ಮೋಸದ ಚಟುವಟಿಕೆ ರೂಪಿಸುವಲ್ಲಿ ನಾಗೇಂದ್ರ ಮುಖ್ಯ ಪಾತ್ರ ವಹಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಚುನಾವಣೆಯ ಸಂದರ್ಭದಲ್ಲಿ ನಗದು ನಿರ್ವಹಣೆಯ ಜೊತೆಗೆ ವೈಯಕ್ತಿಕ ಹಾಗೂ ಚುನಾವಣಾ ವೆಚ್ಚಗಳಿಗೆ ಬಳಸಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ.
ಈ ನಿಗಮದ ಹಣವನ್ನು ನಿರ್ವಹಣೆ ಮಾಡುವ ಕಾರ್ಯದಲ್ಲಿ ವಿಜಯ್ ಕುಮಾರ್ ಗೌಡ ವಹಿಸಿಕೊಂಡಿದ್ದು, ಆರೋಪಿ ನೆಕ್ಕುಂಟಿ ನಾಗರಾಜ್ ಸಲಹೆಯ ಮೇರೆಗೆ ಮತ್ತೋರ್ವ ಆರೋಪಿ ಎಡರು ರುದ್ರಯ್ಯನಿಗೆ ಆರೋಪಿ ವಿಜಯ್ ಎಂಬಾತ 61 ಕೋಟಿ ರೂಗಳನ್ನು ನೀಡಿದ್ದಾನೆ ಎಂದು ವರದಿ ಮಾಡಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…