ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅತ್ಮಹತ್ಯೆ ಹಾಗೂ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯಹಾರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳದ(ಎಸ್ಐಟಿ) ತಂಡ ರಚಿಸಿದೆ.
ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿ ಮನೀಶ್ ಖರ್ಬೀಕರ್ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳೊಂದಿಗೆ ಎಸ್ಐಟಿ ತಂಡ ರಚನೆ ಮಾಡಲಾಗಿದೆ. ಈ ಮೂಲಕ ಎಸ್ಐಟಿ ವರದಿ ಆಧರಿಸಿವೇ ಸರ್ಕಾರ ಸಚಿವ ಬಿ.ನಾಗೇಂದ್ರ ವಿರುದ್ಧ ಕ್ರಮ ಕೊಗೊಳ್ಳಲಿದೆ ಎನ್ನಲಾಗಿದೆ.
ಅಷ್ಟೇ ಅಲ್ಲದೇ ನಿಗಮದಲ್ಲಿ ಅಕ್ರಮ ಹಣ ನಡೆದಿದೆ ಎನ್ನಲಾಗಿದ್ದು, ಈ ಹಣ ಅಂತಾರಾಜ್ಯಕ್ಕೆ ವರ್ಗಾವಣೆ ಆಗಿದ್ದರೆ ಎಸ್ಐಟಿ ತನಿಖೆ ಮಾಡಲು ಆಗಲ್ಲ. ಆಗ ಅನಿವಾರ್ಯವಾಗಿ ಪ್ರಕರಣವನ್ನು ಸಿಬಿಐಗೆ ವಹಿಸಿಬೇಕಾಗುತ್ತದೆ. ಈ ಹಿನ್ನೆಲೆ ತಕ್ಷಣಕ್ಕೆ ಎಸ್ಐಟಿ ರಚನೆ ಮಾಡಲಾಗಿದೆ.
ಏನಿದು ಪ್ರಕರಣ?
ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯ ಅಧೀಕ್ಷಕ ಚಂದ್ರಶೇಖರ್ ಪಿ(52) ಅವರು ಶಿವಮೊಗ್ಗದ ವಿನೋಬಾ ನಗರದ ತಮ್ಮ ನಿವಾಸದಲ್ಲಿ ಮೇ.26ರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದರು. ತಮ್ಮ ಸಾವಿಗೆ ಕಾರಣರಾಗಿದ್ದವರ ಹೆಸರು ಮತ್ತು ನಿಗಮದ ಹಣಕಾಸಿನ ಅವ್ಯವಹಾರದ ಬಗ್ಗೆ ಡೆತ್ನೋಟ್ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
Disclaimer: ಯಾವುದೇ ಸಮಸ್ಯೆಗೂ ಅತ್ಮಹತ್ಯೆ ಒಂದೇ ಪರಿಹಾರವಲ್ಲ. ನಿಮ್ಮ ತೊಂದರೆಗಳನ್ನು ಆತ್ಮೀಯರ ಜತೆ ಹಂಚಿಕೊಳ್ಳಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆಮಾಡಿ ಮಾತನಾಡಿ: 9152987821
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…