Categories: ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಬಿ.ನಾಗೇಂದ್ರ ಪಿಎ ಬಂಧನ

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದೆ.

ಈ ಹಗರಣ ಸಂಬಂಧ ಇಂದು(ಜು.10) ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್‌ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದರು.

ಬಂಧಿತ ಹರೀಶ್‌ ಅಕ್ರಮದ ವೇಳೆ ಅಧಿಕಾರಗಳಿಗೆ ಮೌಖಿಕ ಸೂಚನೆ ನೀಡಿದ್ದನು. ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ್ದಾನೆ. ಜೊತೆಗೆ ಹೈದರಾಬಾದ್‌ನ ಆರೋಪಿ ಸತ್ಯನಾರಾಯಣ ವರ್ಮಾನಿಂದ ಬಂದಿದ್ದ ಹಣ ಹರೀಶ್‌ಗೆ ತಲುಪಿತ್ತು. ಹೀಗಾಗಿ ಸಚಿವ ನಾಗೇಂದ್ರ ಪರವಾಗಿ ಅಕ್ರಮ ಹಣದ ವಹವಾಟು ನಡೆಸಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಹರೀಶ್‌ನನ್ನು ಬಂಧಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago