Mysore
35
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ವಾಲ್ಮೀಕಿ ಹಗರಣ: ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ಇಡಿ ದಾಳಿ

tukaraam

ಬಳ್ಳಾರಿ: ವಾಲ್ಮೀಕಿ ಹಗರಣ ಪ್ರಕರಣದಲ್ಲಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಇಡಿ ದಾಳಿ ನಡೆದಿದೆ. ಶಾಸಕರಾದ ನಾರಾ ಭರತ್‌ ರೆಡ್ಡಿ, ಗಣೇಶ್‌, ಶ್ರೀನಿವಾಸ್‌ ಅವರ ಮನೆ ಮೇಲೂ ಇಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್‌ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.

ಬಳ್ಳಾರಿ ಚುನಾವಣೆಗೆ ಕೋಟಿ ಕೋಟಿ ಹಣ ಹಂಚಿಕೆ ಆರೋಪದಲ್ಲಿ ಸಂಸದ ತುಕಾರಾಂ ಮನೆ ಮೇಲೆ ದಾಳಿ ನಡೆದಿದೆ. ಲೋಕಸಭೆ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನೆಯಲ್ಲಿ ಶೋಧ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Tags:
error: Content is protected !!