K Rajesh Rai
ಬೆಂಗಳೂರು : ಇಂದಿನ ವಿದ್ಯಾರ್ಥಿಗಳಿಗೆ ಮೌಲ್ಯವೃಧಿತ ಶಿಕ್ಷಣ ಅವಶ್ಯಕವಿದೆ. ಸ್ವಯಂ ಪ್ರಯತ್ನದಿಂದ ಹೊಸ ವಿಚಾರಗಳ ಕುರಿತು ತಿಳಿದುಕೊಳ್ಳುವುದು ತುಂಬಾ ಮುಖ್ಯ ಎಂದು ಹೈಕೋರ್ಟ್ನ ನ್ಯಾಯಾಧೀಶರಾದ ಕೆ.ರಾಜೇಶ್ ರೈ ಅವರು ತಿಳಿಸಿದರು.
ನಗರದ ನಾಗಭಾವಿಯಲ್ಲಿರುವ ಶ್ರೀ ಲಕ್ಷ್ಮಿ ಕಾನೂನು ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಆಗುತ್ತಿರುವ ಮಹಿಳ ದೌರ್ಜನ್ಯ, ಲೈಂಗಿಕ ಕಿರುಕುಳ ಹಲ್ಲೆ ಸೇರಿದಂತೆ ಇನ್ನಿತರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ. ಸದ್ಯ ಮಹಿಳಾ ನ್ಯಾಯಾಧೀಶರ ಅಗತ್ಯವಿದ್ದು, ಅವರ ಪಾತ್ರ ತುಂಬಾ ಮಹತ್ವ ಪಡೆದಿದೆ. ಪಠ್ಯದ ಜೊತೆಗೆ ಪ್ರಾಯೋಗಿಕ ಅಧ್ಯಯನಕ್ಕೆ ಒತ್ತು ನೀಡಬೇಕೆಂದು ವಿದ್ಯಾರ್ಥಿಗಳಿಗೆ ಅವರು ಕರೆ ನೀಡಿದರು.
ಕಾನೂನು ವಿದ್ಯಾರ್ಥಿಗಳು ಯಾವುದೇ ಹಿಂಜರಿಕೆ ಇಲ್ಲದೆ ಕಲಿಕೆಗೆ ಒತ್ತು ನೀಡಿ. ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುವ ಸಲುವಾಗಿ ಬೆಂಗಳೂರು ಭಾಗದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ವೇಳೆ ಹೈಕೋರ್ಟ್ಗೆ ಭೇಟಿ ನೀಡಲು ಸೂಚಿಸಿದ್ದೇನೆ. ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಎಲ್ಲಾ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
ಶ್ರೀ ಲಕ್ಷ್ಮಿ ಕಾನೂನು ಮಹಾವಿದ್ಯಾಲಯದ ನಿರ್ದೇಶಕ ಡಾ.ದರ್ಶನ ಎಲ್. ಗೌಡ ಅವರು ಮಾತನಾಡಿ, ಕಾನೂನು ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಎಲ್ಲಾ ಮೌಲ್ಯಗಳನ್ನು ನಮ್ಮ ಕಾಲೇಜಿನಲ್ಲಿ ಬೋಧಿಸಲಾಗುತ್ತದೆ. ಕಾನೂನಿನ ಬಗ್ಗೆ ಆಳವಾಗಿ ಅಧ್ಯಯನ ಮಾಡುವ ಮೂಲಕ ಶೀಘ್ರತಗತಿಯಲ್ಲಿ ನ್ಯಾಯ ಒದಗಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಅವರು, ಗ್ರಾಮೀಣ ಹಿನ್ನಲೆಯಿಂದ ಬಂದ ಸಾಧಕರು ಹಾಗೂ ಕಾನೂನು ಕಾಲೇಜುಗಳ ಅಗತ್ಯ ಮತ್ತು ಸಿವಿಲ್ ನ್ಯಾಯಾಧೀಶರಾಗುವ ಪ್ರಕ್ರಿಯೆ ಕುರಿತು ಉಪನ್ಯಾಸ ನೀಡಿದರು.
ಎಸ್ಎಲ್ಜಿಐ ಸಿಇಒ ಶಿವಬಸವಯ್ಯ, ಶ್ರೀ ಲಕ್ಷ್ಮಿ ಕಾನೂನು ಮಹಾವಿದ್ಯಾಲಯದ ನಿರ್ದೇಶಕ ಡಾ.ದರ್ಶನ ಎಲ್. ಗೌಡ, ಆಡಳಿತ ನಿರ್ದೇಶಕ ಪ್ರೊ.ಕೆ.ನಾಗಿರೆಡ್ಡಿ, ಕಾಲೇಜಿನ ಪ್ರಾಚಾರ್ಯರಾದ ಡಾ.ಕಾವ್ಯಾ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…