ರಾಜ್ಯ

ಬೆಂಗಳೂರಿನಲ್ಲಿ ತಯಾರಾಗುತ್ತಿದೆ ವಂದೇ ಭಾರತ್‌ ಸ್ಲೀಪರ್‌ ರೈಲು

 ಬೆಂಗಳೂರು : ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೆಮಿ ಹೈಸ್ವೀಡ್ ರೈಲಾಗಿ ಸಂಚರಿಸುತ್ತಿದೆ. ಆದರೆ, ಈ ರೈಲುಗಳಲ್ಲಿ ಕುಳಿತುಕೊಂಡು ಮಾತ್ರ ತೆರಳಬಹುದು. ಇದರಿಂದಾಗಿ ಸಾರ್ವಜನಿಕರು ರಾತ್ರಿ ವೇಳೆ ಆರಾಮದಾಯಕವಾಗಿ ನಿದ್ರಿಸುತ್ತಾ ಪ್ರಯಾಣಿಸಲು ರೈಲ್ವೆ ಇಲಾಖೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಇತ್ತೀಚೆಗೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ತಯಾರಿಸುತ್ತಿರುವ ಬೆಂಗಳೂರಿನ ಬಿಇಎಂಎಲ್ ಉತ್ಪಾದನಾ ಘಟಕಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಭೇಟಿ ನೀಡಿದ್ದರು. ಆ ಬಳಿಕ ಮಾತನಾಡಿದ್ದ ಅವರು, ವಂದೇ ಭಾರತ್ ಸ್ಲೀಪರ್ ರೈಲುಗಳು ಮುಂದಿನ 6 ತಿಂಗಳಲ್ಲಿ ಹಳಿಗೆ ಬರಲಿವೆ ಎಂದು ಹೇಳಿದ್ದಾರೆ.

ಈ ಸ್ಲೀಪರ್‌ ರೈಲುಗಳ ಕೋಚ್‌ಗಳು ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ಗಳಿಗಿಂತ ಹೆಚ್ಚು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರಲಿವೆ. ಜೊತೆಗೆ ಶಬ್ದವು ಬಹುತೇಕ ಶೂನ್ಯವಾಗಿರುತ್ತದೆ. ಇದರಿಂದ ಉತ್ತಮವಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತದೆ. ಕೋಚ್‌ ವಿನ್ಯಾಸವು ಹೊಸತನದಿಂದ ಕೂಡಿದ್ದು, ಪ್ರಯಾಣಿಕ ಸ್ನೇಹಿಯಾಗಿರುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸ್ಲೀಪರ್‌  ರೈಲಿನ ಕೋಚ್‌ಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸುತ್ತಿರುವುದರಿಂದ ಉತ್ಪಾದನಾ ವೆಚ್ಚವು ಸಾಕಷ್ಟು ಕಡಿಮೆಯಾಗುತ್ತದೆ. ವಿದೇಶದಲ್ಲಿ ಇದೇ 1 ಕೋಚ್‌ ಸಿದ್ಧಪಡಿಸಲು ಸುಮಾರು ರೂ.10 ಕೋಟಿ ವ್ಯಯಿಸಬೇಕಾಗಿತ್ತು. ದೇಶಯಲ್ಲಿ ತಯಾರಿಸುತ್ತಿರುವುದರಿಂದ ಸುಮಾರು ರೂ.8 – 9 ಕೋಟಿ ಖರ್ಚಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago