ರಾಜ್ಯ

ಬೆಂಗಳೂರಿನಲ್ಲಿ ತಯಾರಾಗುತ್ತಿದೆ ವಂದೇ ಭಾರತ್‌ ಸ್ಲೀಪರ್‌ ರೈಲು

 ಬೆಂಗಳೂರು : ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೆಮಿ ಹೈಸ್ವೀಡ್ ರೈಲಾಗಿ ಸಂಚರಿಸುತ್ತಿದೆ. ಆದರೆ, ಈ ರೈಲುಗಳಲ್ಲಿ ಕುಳಿತುಕೊಂಡು ಮಾತ್ರ ತೆರಳಬಹುದು. ಇದರಿಂದಾಗಿ ಸಾರ್ವಜನಿಕರು ರಾತ್ರಿ ವೇಳೆ ಆರಾಮದಾಯಕವಾಗಿ ನಿದ್ರಿಸುತ್ತಾ ಪ್ರಯಾಣಿಸಲು ರೈಲ್ವೆ ಇಲಾಖೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಇತ್ತೀಚೆಗೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ತಯಾರಿಸುತ್ತಿರುವ ಬೆಂಗಳೂರಿನ ಬಿಇಎಂಎಲ್ ಉತ್ಪಾದನಾ ಘಟಕಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಭೇಟಿ ನೀಡಿದ್ದರು. ಆ ಬಳಿಕ ಮಾತನಾಡಿದ್ದ ಅವರು, ವಂದೇ ಭಾರತ್ ಸ್ಲೀಪರ್ ರೈಲುಗಳು ಮುಂದಿನ 6 ತಿಂಗಳಲ್ಲಿ ಹಳಿಗೆ ಬರಲಿವೆ ಎಂದು ಹೇಳಿದ್ದಾರೆ.

ಈ ಸ್ಲೀಪರ್‌ ರೈಲುಗಳ ಕೋಚ್‌ಗಳು ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ಗಳಿಗಿಂತ ಹೆಚ್ಚು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರಲಿವೆ. ಜೊತೆಗೆ ಶಬ್ದವು ಬಹುತೇಕ ಶೂನ್ಯವಾಗಿರುತ್ತದೆ. ಇದರಿಂದ ಉತ್ತಮವಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತದೆ. ಕೋಚ್‌ ವಿನ್ಯಾಸವು ಹೊಸತನದಿಂದ ಕೂಡಿದ್ದು, ಪ್ರಯಾಣಿಕ ಸ್ನೇಹಿಯಾಗಿರುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸ್ಲೀಪರ್‌  ರೈಲಿನ ಕೋಚ್‌ಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸುತ್ತಿರುವುದರಿಂದ ಉತ್ಪಾದನಾ ವೆಚ್ಚವು ಸಾಕಷ್ಟು ಕಡಿಮೆಯಾಗುತ್ತದೆ. ವಿದೇಶದಲ್ಲಿ ಇದೇ 1 ಕೋಚ್‌ ಸಿದ್ಧಪಡಿಸಲು ಸುಮಾರು ರೂ.10 ಕೋಟಿ ವ್ಯಯಿಸಬೇಕಾಗಿತ್ತು. ದೇಶಯಲ್ಲಿ ತಯಾರಿಸುತ್ತಿರುವುದರಿಂದ ಸುಮಾರು ರೂ.8 – 9 ಕೋಟಿ ಖರ್ಚಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

andolanait

Recent Posts

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

3 mins ago

ಓದುಗರ ಪತ್ರ: ಮಕ್ಕಳು ಅಗತ್ಯವಿರುವಷ್ಟೇ ಮೊಬೈಲ್ ಬಳಸಲಿ

ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…

5 mins ago

ಓದುಗರ ಪತ್ರ: ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ಕೈಬಿಡಿ

ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…

8 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಲಕ್ಷಾಂತರ ತಂಗಿಯರ ಬದುಕನ್ನು ಹೊಲಿಯುವ ‘ಟೈಲರ್ ಅಣ್ಣʼ

ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…

3 hours ago

ಮಡಿಕೇರಿ ನಗರದ ಅನಧಿಕೃತ ಹೋಂಸ್ಟೇಗಳಿಗೆ ನೋಟಿಸ್

ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…

3 hours ago

ಮಿರ್ಲೆ: ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…

3 hours ago