ಬೆಂಗಳೂರು : ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಪ್ರೀಮಿಯಂ ಸೆಮಿ ಹೈಸ್ವೀಡ್ ರೈಲಾಗಿ ಸಂಚರಿಸುತ್ತಿದೆ. ಆದರೆ, ಈ ರೈಲುಗಳಲ್ಲಿ ಕುಳಿತುಕೊಂಡು ಮಾತ್ರ ತೆರಳಬಹುದು. ಇದರಿಂದಾಗಿ ಸಾರ್ವಜನಿಕರು ರಾತ್ರಿ ವೇಳೆ ಆರಾಮದಾಯಕವಾಗಿ ನಿದ್ರಿಸುತ್ತಾ ಪ್ರಯಾಣಿಸಲು ರೈಲ್ವೆ ಇಲಾಖೆ ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ಅಭಿವೃದ್ಧಿಪಡಿಸುತ್ತಿದೆ.
ಇತ್ತೀಚೆಗೆ ವಂದೇ ಭಾರತ್ ಸ್ಲೀಪರ್ ರೈಲುಗಳನ್ನು ತಯಾರಿಸುತ್ತಿರುವ ಬೆಂಗಳೂರಿನ ಬಿಇಎಂಎಲ್ ಉತ್ಪಾದನಾ ಘಟಕಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ ನೀಡಿದ್ದರು. ಆ ಬಳಿಕ ಮಾತನಾಡಿದ್ದ ಅವರು, ವಂದೇ ಭಾರತ್ ಸ್ಲೀಪರ್ ರೈಲುಗಳು ಮುಂದಿನ 6 ತಿಂಗಳಲ್ಲಿ ಹಳಿಗೆ ಬರಲಿವೆ ಎಂದು ಹೇಳಿದ್ದಾರೆ.
ಈ ಸ್ಲೀಪರ್ ರೈಲುಗಳ ಕೋಚ್ಗಳು ವಂದೇ ಭಾರತ್ ಎಕ್ಸ್ಪ್ರೆಸ್ ಕೋಚ್ಗಳಿಗಿಂತ ಹೆಚ್ಚು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರಲಿವೆ. ಜೊತೆಗೆ ಶಬ್ದವು ಬಹುತೇಕ ಶೂನ್ಯವಾಗಿರುತ್ತದೆ. ಇದರಿಂದ ಉತ್ತಮವಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತದೆ. ಕೋಚ್ ವಿನ್ಯಾಸವು ಹೊಸತನದಿಂದ ಕೂಡಿದ್ದು, ಪ್ರಯಾಣಿಕ ಸ್ನೇಹಿಯಾಗಿರುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.
ವಂದೇ ಭಾರತ್ ಸ್ಲೀಪರ್ ರೈಲಿನ ಕೋಚ್ಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸುತ್ತಿರುವುದರಿಂದ ಉತ್ಪಾದನಾ ವೆಚ್ಚವು ಸಾಕಷ್ಟು ಕಡಿಮೆಯಾಗುತ್ತದೆ. ವಿದೇಶದಲ್ಲಿ ಇದೇ 1 ಕೋಚ್ ಸಿದ್ಧಪಡಿಸಲು ಸುಮಾರು ರೂ.10 ಕೋಟಿ ವ್ಯಯಿಸಬೇಕಾಗಿತ್ತು. ದೇಶಯಲ್ಲಿ ತಯಾರಿಸುತ್ತಿರುವುದರಿಂದ ಸುಮಾರು ರೂ.8 – 9 ಕೋಟಿ ಖರ್ಚಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…