ರಾಜ್ಯ

ಬೆಂಗಳೂರಿನಲ್ಲಿ ತಯಾರಾಗುತ್ತಿದೆ ವಂದೇ ಭಾರತ್‌ ಸ್ಲೀಪರ್‌ ರೈಲು

 ಬೆಂಗಳೂರು : ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೆಮಿ ಹೈಸ್ವೀಡ್ ರೈಲಾಗಿ ಸಂಚರಿಸುತ್ತಿದೆ. ಆದರೆ, ಈ ರೈಲುಗಳಲ್ಲಿ ಕುಳಿತುಕೊಂಡು ಮಾತ್ರ ತೆರಳಬಹುದು. ಇದರಿಂದಾಗಿ ಸಾರ್ವಜನಿಕರು ರಾತ್ರಿ ವೇಳೆ ಆರಾಮದಾಯಕವಾಗಿ ನಿದ್ರಿಸುತ್ತಾ ಪ್ರಯಾಣಿಸಲು ರೈಲ್ವೆ ಇಲಾಖೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಇತ್ತೀಚೆಗೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ತಯಾರಿಸುತ್ತಿರುವ ಬೆಂಗಳೂರಿನ ಬಿಇಎಂಎಲ್ ಉತ್ಪಾದನಾ ಘಟಕಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಭೇಟಿ ನೀಡಿದ್ದರು. ಆ ಬಳಿಕ ಮಾತನಾಡಿದ್ದ ಅವರು, ವಂದೇ ಭಾರತ್ ಸ್ಲೀಪರ್ ರೈಲುಗಳು ಮುಂದಿನ 6 ತಿಂಗಳಲ್ಲಿ ಹಳಿಗೆ ಬರಲಿವೆ ಎಂದು ಹೇಳಿದ್ದಾರೆ.

ಈ ಸ್ಲೀಪರ್‌ ರೈಲುಗಳ ಕೋಚ್‌ಗಳು ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ಗಳಿಗಿಂತ ಹೆಚ್ಚು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರಲಿವೆ. ಜೊತೆಗೆ ಶಬ್ದವು ಬಹುತೇಕ ಶೂನ್ಯವಾಗಿರುತ್ತದೆ. ಇದರಿಂದ ಉತ್ತಮವಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತದೆ. ಕೋಚ್‌ ವಿನ್ಯಾಸವು ಹೊಸತನದಿಂದ ಕೂಡಿದ್ದು, ಪ್ರಯಾಣಿಕ ಸ್ನೇಹಿಯಾಗಿರುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸ್ಲೀಪರ್‌  ರೈಲಿನ ಕೋಚ್‌ಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸುತ್ತಿರುವುದರಿಂದ ಉತ್ಪಾದನಾ ವೆಚ್ಚವು ಸಾಕಷ್ಟು ಕಡಿಮೆಯಾಗುತ್ತದೆ. ವಿದೇಶದಲ್ಲಿ ಇದೇ 1 ಕೋಚ್‌ ಸಿದ್ಧಪಡಿಸಲು ಸುಮಾರು ರೂ.10 ಕೋಟಿ ವ್ಯಯಿಸಬೇಕಾಗಿತ್ತು. ದೇಶಯಲ್ಲಿ ತಯಾರಿಸುತ್ತಿರುವುದರಿಂದ ಸುಮಾರು ರೂ.8 – 9 ಕೋಟಿ ಖರ್ಚಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago