ರಾಜ್ಯ

ಬೆಂಗಳೂರಿನಲ್ಲಿ ತಯಾರಾಗುತ್ತಿದೆ ವಂದೇ ಭಾರತ್‌ ಸ್ಲೀಪರ್‌ ರೈಲು

 ಬೆಂಗಳೂರು : ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರೀಮಿಯಂ ಸೆಮಿ ಹೈಸ್ವೀಡ್ ರೈಲಾಗಿ ಸಂಚರಿಸುತ್ತಿದೆ. ಆದರೆ, ಈ ರೈಲುಗಳಲ್ಲಿ ಕುಳಿತುಕೊಂಡು ಮಾತ್ರ ತೆರಳಬಹುದು. ಇದರಿಂದಾಗಿ ಸಾರ್ವಜನಿಕರು ರಾತ್ರಿ ವೇಳೆ ಆರಾಮದಾಯಕವಾಗಿ ನಿದ್ರಿಸುತ್ತಾ ಪ್ರಯಾಣಿಸಲು ರೈಲ್ವೆ ಇಲಾಖೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಇತ್ತೀಚೆಗೆ ವಂದೇ ಭಾರತ್ ಸ್ಲೀಪರ್‌ ರೈಲುಗಳನ್ನು ತಯಾರಿಸುತ್ತಿರುವ ಬೆಂಗಳೂರಿನ ಬಿಇಎಂಎಲ್ ಉತ್ಪಾದನಾ ಘಟಕಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಭೇಟಿ ನೀಡಿದ್ದರು. ಆ ಬಳಿಕ ಮಾತನಾಡಿದ್ದ ಅವರು, ವಂದೇ ಭಾರತ್ ಸ್ಲೀಪರ್ ರೈಲುಗಳು ಮುಂದಿನ 6 ತಿಂಗಳಲ್ಲಿ ಹಳಿಗೆ ಬರಲಿವೆ ಎಂದು ಹೇಳಿದ್ದಾರೆ.

ಈ ಸ್ಲೀಪರ್‌ ರೈಲುಗಳ ಕೋಚ್‌ಗಳು ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ಗಳಿಗಿಂತ ಹೆಚ್ಚು ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿರಲಿವೆ. ಜೊತೆಗೆ ಶಬ್ದವು ಬಹುತೇಕ ಶೂನ್ಯವಾಗಿರುತ್ತದೆ. ಇದರಿಂದ ಉತ್ತಮವಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತದೆ. ಕೋಚ್‌ ವಿನ್ಯಾಸವು ಹೊಸತನದಿಂದ ಕೂಡಿದ್ದು, ಪ್ರಯಾಣಿಕ ಸ್ನೇಹಿಯಾಗಿರುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದ್ದಾರೆ.

ವಂದೇ ಭಾರತ್ ಸ್ಲೀಪರ್‌  ರೈಲಿನ ಕೋಚ್‌ಗಳನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸುತ್ತಿರುವುದರಿಂದ ಉತ್ಪಾದನಾ ವೆಚ್ಚವು ಸಾಕಷ್ಟು ಕಡಿಮೆಯಾಗುತ್ತದೆ. ವಿದೇಶದಲ್ಲಿ ಇದೇ 1 ಕೋಚ್‌ ಸಿದ್ಧಪಡಿಸಲು ಸುಮಾರು ರೂ.10 ಕೋಟಿ ವ್ಯಯಿಸಬೇಕಾಗಿತ್ತು. ದೇಶಯಲ್ಲಿ ತಯಾರಿಸುತ್ತಿರುವುದರಿಂದ ಸುಮಾರು ರೂ.8 – 9 ಕೋಟಿ ಖರ್ಚಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

andolanait

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

9 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

9 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

9 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

10 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

13 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

14 hours ago