"There has been malpractice in the voter list across the entire nation
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಂದೇ ಮಾತರಂ ಹೇಳಿ ರಾಷ್ಟ್ರಗೀತೆಯನ್ನು ಡೀ ಪ್ರಮೋಟ್ ಮಾಡಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದೆ. ಆರ್ಎಸ್ಎಸ್ನ ಗೋಳವಲ್ಕರ್ ರಾಷ್ಟ್ರಗೀತೆಯ ಬಗ್ಗೆಯೇ ಅಪಸ್ವರ ಎತ್ತಿದ್ದರು. ಒಂದೇ ಒಂದು ದಿನವೂ ರಾಷ್ಟ್ರ ಗೀತೆಯನ್ನು ಅವರ ಸಂಘದಲ್ಲಿ ಹಾಡಿದವರಲ್ಲ. ಅದೇ ಕಾರಣಕ್ಕೆ ವಂದೇ ಮಾತರಂನ್ನು ಎಲ್ಲಾ ಕಡೆ ಕಡ್ಡಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮೊದಲು ವಂದೇ ಮಾತರಂ, ಬಳಿಕ ರಾಷ್ಟ್ರಗೀತೆ ಹಾಡುವುದು ರಾಷ್ಟ್ರಗೀತೆಗೆ ಅಪಮಾನ ಮಾಡಿದ ಹಾಗೆ. ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಅಪಮಾನ ಮಾಡುತ್ತಿದೆ. ಬಿಜೆಪಿಯವರು ರಾಷ್ಟ್ರಗೀತೆಯ ವಿರುದ್ಧವೇ ಹೋಗುತ್ತಿದ್ದಾರೆ. ವಂದೇ ಮಾತರಂ ಬೆಂಗಾಲ್ ಪ್ರಾಂತ್ಯದ ರಾಷ್ಟ್ರಗೀತೆ ಆಗಿತ್ತೇ ವಿನಃ ಇಡೀ ದೇಶದ ರಾಷ್ಟ್ರಗೀತೆ ಆಗಿರಲಿಲ್ಲ. ಬೆಂಗಾಲ್ ಚುನಾವಣೆ ಸಲುವಾಗಿ ವಂದೇ ಮಾತರಂ ಕಡ್ಡಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ದೇವರ ಹೆಸರು ಕೂಡ ವಂದೇ ಮಾತರಂನಲ್ಲಿದೆ. ಎಲ್ಲಾ ಧರ್ಮದವರೂ ಈ ದೇಶದಲ್ಲಿ ಇರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ. ಕೆಟ್ಟ ಭಾವನೆಗಳನ್ನು ಕೆರಳಿಸಲು, ಕೋಮು ಭಾವನೆ ಕೆರಳಿಸಲು ಇದನ್ನು ತಂದಿದ್ದಾರೆ. ಇದು ಕೂಡ ಚುನಾವಣಾ ಗಿಮಿಕ್ ಎಂದು ಕಿಡಿಕಾರಿದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…