ಉಡುಪಿ: ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅವಾಂತರವನ್ನೇ ಸೃಷ್ಟಸಿದೆ.
ಕೊಡಗು, ಉಡುಪಿ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೈದು ದಿನಗಳಿಂದ ನಿರಂತರ ಜೋರು ಮಳೆ ಸುರಿಯುತ್ತಿದ್ದು, ಮಳೆಯಿಂದ ಕೆಲವು ಪ್ರಮುಖ ರಸ್ತೆಗಳು ಜಲಾವೃತಗೊಂಡಿದೆ. ಬ್ರಹ್ಮಾವರದ ಅರೂರು ಮತ್ತು ಬೆಳ್ಳಾರು ನಡುವೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಮುಳುಗಿ ಹೋಗಿದೆ. ಜೋರು ಮಳೆ ಪರಿಣಾಮ ಹೊಳೆಗಳು ಉಕ್ಕಿಹರಿದು ತಗ್ಗು ಪ್ರದೇಶಗಳಿಗೆ ನೀರು ಹರಿಯುತ್ತಿದೆ. ಪರಿಣಾಮ ಎಲ್ಲಾವು ಜಲಾವೃತಗೊಂಡಿವೆ.
ಜೋರು ಬಿರುಗಾಳಿಯೊಂದಿಗೆ ಸುರಿಯುತ್ತಿರುವ ಮಳೆಯಿಂದ ನೂರಾರು ಮರಗಳು ಧರೆಗುರುಳಿದ್ದು, ಕುಂದಾಪುರ ಕಮಲಶಿಲೆ ದೇವಾಲಯವು ಕೂಡ ಜಲಾವೃತಗೊಂಡಿದೆ. ದೇವಾಲಯದ ಪಕ್ಕದಲ್ಲೇ ಹರಿಯುತ್ತಿರುವ ವಾರಾಹಿ ಉಪನದಿ ಕುಬ್ಜೆ ನದಿಯು ಉಕ್ಕಿ ಹರಿದು ದೇವಾಲಯ ಗರ್ಭಗುಡಿ ಪ್ರವೇಶಿಸಿದೆ. ಪ್ರಮುಖವಾಗಿ ಉದ್ಭವ ಬ್ರಾಹ್ಮೀ ದುರ್ಗಾಪರಮೇಶ್ವರಿ ಲಿಂಗವು ಸಂಪೂರ್ಣ ಮುಳುಗಿದೆ.
ತಗ್ಗುಪ್ರದೇಶಗಳಲ್ಲಿರುವ ಜನರನ್ನು ಮುಂಜಾಗ್ರತೆಯ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕೆಲಸ ಭರದಿಂದ ಸಾಗುತ್ತಿದೆ. ಜೊತೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕನ ನಡೆಸುತ್ತಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…