ಉಡುಪಿ: ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಅವಾಂತರವನ್ನೇ ಸೃಷ್ಟಸಿದೆ.
ಕೊಡಗು, ಉಡುಪಿ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಳೆದೈದು ದಿನಗಳಿಂದ ನಿರಂತರ ಜೋರು ಮಳೆ ಸುರಿಯುತ್ತಿದ್ದು, ಮಳೆಯಿಂದ ಕೆಲವು ಪ್ರಮುಖ ರಸ್ತೆಗಳು ಜಲಾವೃತಗೊಂಡಿದೆ. ಬ್ರಹ್ಮಾವರದ ಅರೂರು ಮತ್ತು ಬೆಳ್ಳಾರು ನಡುವೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಮುಳುಗಿ ಹೋಗಿದೆ. ಜೋರು ಮಳೆ ಪರಿಣಾಮ ಹೊಳೆಗಳು ಉಕ್ಕಿಹರಿದು ತಗ್ಗು ಪ್ರದೇಶಗಳಿಗೆ ನೀರು ಹರಿಯುತ್ತಿದೆ. ಪರಿಣಾಮ ಎಲ್ಲಾವು ಜಲಾವೃತಗೊಂಡಿವೆ.
ಜೋರು ಬಿರುಗಾಳಿಯೊಂದಿಗೆ ಸುರಿಯುತ್ತಿರುವ ಮಳೆಯಿಂದ ನೂರಾರು ಮರಗಳು ಧರೆಗುರುಳಿದ್ದು, ಕುಂದಾಪುರ ಕಮಲಶಿಲೆ ದೇವಾಲಯವು ಕೂಡ ಜಲಾವೃತಗೊಂಡಿದೆ. ದೇವಾಲಯದ ಪಕ್ಕದಲ್ಲೇ ಹರಿಯುತ್ತಿರುವ ವಾರಾಹಿ ಉಪನದಿ ಕುಬ್ಜೆ ನದಿಯು ಉಕ್ಕಿ ಹರಿದು ದೇವಾಲಯ ಗರ್ಭಗುಡಿ ಪ್ರವೇಶಿಸಿದೆ. ಪ್ರಮುಖವಾಗಿ ಉದ್ಭವ ಬ್ರಾಹ್ಮೀ ದುರ್ಗಾಪರಮೇಶ್ವರಿ ಲಿಂಗವು ಸಂಪೂರ್ಣ ಮುಳುಗಿದೆ.
ತಗ್ಗುಪ್ರದೇಶಗಳಲ್ಲಿರುವ ಜನರನ್ನು ಮುಂಜಾಗ್ರತೆಯ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ಸಾಗಿಸುವ ಕೆಲಸ ಭರದಿಂದ ಸಾಗುತ್ತಿದೆ. ಜೊತೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕನ ನಡೆಸುತ್ತಿದ್ದಾರೆ.
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್ಡಿಎ ನಾಯಕರು ಸಚಿವರಾಗಿ…
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…