ರಾಜ್ಯ

ರಾಜ್ಯದಲ್ಲಿ ನಾಳೆಯೂ ವರುಣನ ಅಬ್ಬರ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಮೈಸೂರು : ರಾಜ್ಯದಲ್ಲಿ ನಾಳೆಯೂ ವರುಣನ ಅಬ್ಬರ ಮುಂದುವರಿಯಲಿದೆ. ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಉಳಿದಂತೆ ಮೈಸೂರು ಮತ್ತು ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:-ದರ್ಶನ್‌ಗೆ ಸಿಗದ ಅಗತ್ಯ ಸೌಲಭ್ಯ : ಜೈಲು ಪರಿಶೀಲಿಸಿದ ವರದಿ ನೀಡಲು ಕಾನೂನು ಸೇವಾ ಪ್ರಾಧಿಕಾರಕ್ಕೆ ಕೋರ್ಟ್‌ ಸೂಚನೆ

ಬಾಗಲಕೋಟೆ, ಗದಗ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಹಾವೇರಿ, ದಾವಣಗೆರೆ, ಬಳ್ಳಾರಿ, ಕೊಡಗು, ಮೈಸೂರು ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಯೆಲ್ಲೋ​ ಅಲರ್ಟ್​ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್​, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಂದ ನಾಳೆ ವರುಣ ದೂರ ಇರಲಿದ್ದು, ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇಲ್ಲಿ ಕಂಡುಬರಲಿದೆ ಎಂದು ಇಲಾಖೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

5 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

5 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

10 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago