ರಾಜ್ಯ

ವೀರಶೈವ-ಲಿಂಗಾಯತ ಬೇರೆ ಅಲ್ಲ : ಸಚಿವ ಖಂಡ್ರೆ

ಬೆಂಗಳೂರು : ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ ಒಂದೆ ಎಂಬುದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿಲುವಾಗಿದ್ದು, ಪ್ರತ್ಯೇಕ ಧರ್ಮಕ್ಕಾಗಿ ಪ್ರಯತ್ನ ಮುಂದುವರಿಯಲಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಪುನರುಚ್ಚರಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಗಾಂಗಾ ಮಹಾಸಂಸ್ಥಾನದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೂ ವೀರಶೈವ-ಲಿಂಗಾಯತ ಒಂದೇ ಎಂದು ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮಠಾಧಿಪತಿಗಳ ಒಕ್ಕೂಟ ಆಯೋಜಿಸಿದ್ದ ಏಕತಾ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದೆ. ಪೂಜ್ಯ ದಿಂಗಾಲೇಶ್ವರ ಮಹಾಸ್ವಾಮೀಜಿ, ಶ್ರೀ ಸಿದ್ದಲಿಂಗ ಸ್ವಾಮೀಜಿ, ಪಂಚಪೀಠದ ಪೀಠಾಧಿಪತಿಗಳು, ಸಾವಿರಾರು ಹರಚರಗುರು ಮೂರ್ತಿಗಳು ಹಾಗೂ ಸಾವಿರಾರು ಸಮಾಜ ಬಾಂಧವರು ಪಾಲ್ಗೊಂಡಿದ್ದರು. ಈ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ಖಂಡ್ರೆ ತಿಳಿಸಿದರು.

ಎಲ್ಲರಿಗೂ ತೃಪ್ತಿಯಾಗುವಂತೆ ಸಮೀಕ್ಷೆ
ಇದೇ 22ರಿಂದ ಆರಂಭವಾಗಲಿರುವ ಸಮೀಕ್ಷೆ ಪೂರ್ಣಗೊಂಡ ಬಳಿಕ, ಹಿಂದುಳಿದಿರುವಿಕೆಯ ಗುರುತಿಸುವಿಕೆ, ಅಂಕ ನೀಡಿಕೆಯಲ್ಲಿ ಯಾರಿಗೂ ಅನ್ಯಾಯ ಆಗದ ರೀತಿಯಲ್ಲಿ, ಎಲ್ಲರ ಅಭಿಪ್ರಾಯ ಪಡೆದೇ ಸರ್ಕಾರ ಮುಂದಡಿ ಇಡಲಿದೆ. ಇದನ್ನು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ರಾಜ್ಯದ ಎಲ್ಲ 7 ಕೋಟಿ ಜನರಿಗೂ ತೃಪ್ತಿಯಾಗುವ ರೀತಿಯಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಎಲ್ಲ ಜಾತಿ, ಜನಾಂಗದಲ್ಲೂ ಬಡವರಿದ್ದಾರೆ, ನಿರ್ಗತಿಕರಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಸರ್ಕಾರದ ಯೋಜನೆಯ ಲಾಭ ದೊರಕಬೇಕು. ಈ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದರು.
ಹಿಂದುಳಿದಿರುವಿಕೆಯನ್ನು ತಿಳಿಯಲು ಮತ್ತು ಅವರಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ಉದ್ದೇಶದಿಂದಲೇ ಈ ಸಮೀಕ್ಷೆ ನಡೆಯುತ್ತಿದೆ. ಹೀಗಾಗಿ ಸಮಾಜದ ಪ್ರತಿಯೊಬ್ಬರೂ ಇದರಲ್ಲಿ ಭಾಗಿಯಾಗಬೇಕು ಮತ್ತು ವಾಸ್ತವ ಮಾಹಿತಿಯನ್ನು ದಾಖಲೀಕರಿಸಬೇಕು ಎಂದರು.

ಲಿಂಗಾಯತ-ವೀರಶೈವ ಧರ್ಮ ಎಂದು ಧರ್ಮದ ಕಾಲಂನಲ್ಲಿ ಬರೆಸಬೇಕು ಎಂಬುದು ಮಹಾಸಭಾ ನಿಲುವಾಗಿದೆ. ಆದರೆ ಪ್ರತ್ಯೇಕ ಧರ್ಮ ಎಂದು ಇನ್ನೂ ಗುರುತಿಸಿಲ್ಲ ಹೀಗಾಗಿ ಆತ್ಮಸಾಕ್ಷಿಯಂತೆ ಮತ್ತು ವಿವೇಚನೆಗೆ ತಕ್ಕಂತೆ ಬರೆಸುವಂತೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ವೀರಶೈವ ಲಿಂಗಾಯತ ಮಹಾಸಭಾ ವಿಸರ್ಜನೆ ಮಾಡಬೇಕು ಎಂದು ಅಸಂಬದ್ಧ ಹೇಳಿಕೆ ನೀಡಿರುವವರಿಗೆ ತಾವು ಉತ್ತರ ನೀಡುವುದಿಲ್ಲ. ಅವರಿಗೆ ಯಾವುದೇ ಅಸ್ತಿತ್ವ ಇಲ್ಲ ಎಂದು ಈಶ್ವರ ಖಂಡ್ರೆ ಪ್ರತಿಕ್ರಿಯಿಸಿದರು.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

8 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

8 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

8 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

8 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

8 hours ago