Mysore
16
overcast clouds

Social Media

ಬುಧವಾರ, 11 ಫೆಬ್ರವರಿ 2026
Light
Dark

ಅಕ್ಟೋಬರ್.22ರಂದು ವೀರಶೈವ ಮುಖಂಡರ ಸಭೆ ನಡೆಯಲಿದೆ: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಕ್ಯಾಬಿನೆಟ್‌ ಸಭೆಗೂ ಮುನ್ನವೇ ವೀರಶೈವ ಲಿಂಗಾಯತ ಮಹಾಸಭಾದ ಮುಖಂಡರ ಸಭೆ ನಡೆಸುತ್ತೇವೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ದಾವಣಗೆರೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು, ಅಕ್ಟೋಬರ್.‌22ರ ಮಂಗಳವಾರ ವೀರಶೈವ-ಲಿಂಗಾಯತ ಮುಖಂಡರ ಸಭೆ ನಡೆಯಲಿದೆ.

ಇದರಲ್ಲಿ ಯಾವುದೇ ಬಿಜೆಪಿ ಹಾಗೂ ಕಾಂಗ್ರೆಸ್‌ ಎಂಬ ವಿಚಾರ ಬರುವುದಿಲ್ಲ. ಲಿಂಗಾಯತ ಸಮಾಜದ ಎಲ್ಲಾ ಮುಖಂಡರು ಸೇರಿ ಸಭೆ ಮಾಡುತ್ತಿದ್ದೇವೆ. ಈ ಸಭೆ ನಡೆದೇ ನಡೆಯುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಇದು ನಮ್ಮ ಸಮಾಜದ ಪ್ರಶ್ನೆಯೇ ಹೊರತು ಪಕ್ಷದ ಪ್ರಶ್ನೆಯಲ್ಲ ಎಂದು ಹೇಳಿದರು.

Tags:
error: Content is protected !!