ರಾಜ್ಯ

ವೀರಶೈವ ಮಹಾಧಿವೇಶನ: ಸಿಎಂಗೆ ಮನವಿ ಪತ್ರ ನೀಡಿದ ಈಶ್ವರ್‌ ಖಂಡ್ರೆ

ಬೆಳಗಾವಿ : ದಾವಣಗೆರೆಯಲ್ಲಿ ಡಿಸೆಂಬರ್‌ 23, 24 ರಂದು ವೀರಶೈವ ಮಹಾ‌ ಅಧಿವೇಶನ ಹಿನ್ನೆಲೆ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನೆನ್ನೆ (ಗುರುವಾರ) ಪೂರ್ವಭಾವಿ ಸಭೆ ನಡೆಯಿತು. ಈ ಸಭೆಗೆ ಸಮಾಜದ ಎಲ್ಲಾ ಮುಖಂಡರು ಭಾಗಿಯಾಗುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.

ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ನೆನ್ನೆ ಮತ್ತು ಇಂದು ಸಭೆ ನಡೆದಿದೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ ಎಂ.ಬಿ ಪಾಟೀಲ್‌ ಅವರು ನಮ್ಮೊಂದಿಗೆ ಇದ್ದರು, ಎಲ್ಲರಲ್ಲಿಯೂ ಒಮ್ಮತದ ನಿರ್ಧಾರವಿದೆ. ನಾವೆಲ್ಲಾ ಒಂದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದೇವೆ ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

ಮನವಿ ಪತ್ರದಲ್ಲೇನಿದೆ?

ಜಾತಿ ಗಣತಿ ವಿರೋಧಿಸಿ ಸದನದಲ್ಲಿನ ಎಲ್ಲಾ ಸಮುದಾಯದ ನಾಯಕರ ಸಹಿಯೊಂದಿಗೆ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಸಮ್ಮುಖದಲ್ಲಿ ಸಿಎಂ ಅವರನ್ನು ಭೇಟಿಯಾಗಿ ಕಾಂತರಾಜು ಜಾತಿಗಣತಿ ವರದಿ ತಿರಸ್ಕರಿಸಿ, ಬದಲಾಗಿ ನೂತನ ವೈಜ್ಞಾನಿಕ ಜಾತಿ ಗಣತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ. ಈಗಿನ ಜಾತಿ ಗಣತಿಯಲ್ಲಿಯೇ ಹಲವಾರು ಲೋಪದೋಷಗಳು ಕಂಡುಬಂದಿವೆ. ಲಿಂಗಾಯತ ಸುಮುದಾಯದಲ್ಲಿ ಅನೇಕ ಮನೆಗಳ ಸರ್ವೆ ಆಗಿಲ್ಲ, ಆರಂಭಿಕ ಲೋಪದೋಷ ಇರುವ ವರದಿ ಸಲ್ಲಿಸಿದರೆ ಅದು ವೈಜ್ಞಾನಿಕವಾಗಿರಲಿದೆಯೇ ಎಂಬ ಪ್ರಶ್ನೆ ಮೂಡುತ್ತದೆ. ಅದರ ಜೊತೆಜೊತೆಗೆ ಮೂಲ ದಾಖಲಾತಿಗಳು ಕಾಣೆಯಾಗಿದೆ ಎಂದು ಕಂಡುಬರುತ್ತಿದೆ, ಸಹಿಯಾಗದ ದಾಖಲೆ, ಕೇವಲ ಡಾಟಾ ಮೂಲಕ ಜಾತಿ ಗಣತಿ ಮಾಡುವುದು ತಪ್ಪು. ಈಗಿರುವ ಜಾತಿ ಗಣತಿಯಲ್ಲಿ ಕೆಲವೊಂದು ದುರದ್ದೇಶಗಳು ಕಾಣುತ್ತಿದ್ದು, ಹೊಸ ಜಾತಿಗಣತಿ ನಡೆಸುವಂತೆ ವೀರಶೈವ ಲಿಂಗಾಯತ ಸಮುದಾಯ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿದೆ.

andolanait

Recent Posts

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

35 mins ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

2 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

2 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

2 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

4 hours ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

5 hours ago