ಬೆಳಗಾವಿ : ದಾವಣಗೆರೆಯಲ್ಲಿ ಡಿಸೆಂಬರ್ 23, 24 ರಂದು ವೀರಶೈವ ಮಹಾ ಅಧಿವೇಶನ ಹಿನ್ನೆಲೆ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನೆನ್ನೆ (ಗುರುವಾರ) ಪೂರ್ವಭಾವಿ ಸಭೆ ನಡೆಯಿತು. ಈ ಸಭೆಗೆ ಸಮಾಜದ ಎಲ್ಲಾ ಮುಖಂಡರು ಭಾಗಿಯಾಗುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.
ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ನೆನ್ನೆ ಮತ್ತು ಇಂದು ಸಭೆ ನಡೆದಿದೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ ಎಂ.ಬಿ ಪಾಟೀಲ್ ಅವರು ನಮ್ಮೊಂದಿಗೆ ಇದ್ದರು, ಎಲ್ಲರಲ್ಲಿಯೂ ಒಮ್ಮತದ ನಿರ್ಧಾರವಿದೆ. ನಾವೆಲ್ಲಾ ಒಂದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದೇವೆ ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಮನವಿ ಪತ್ರದಲ್ಲೇನಿದೆ?
ಜಾತಿ ಗಣತಿ ವಿರೋಧಿಸಿ ಸದನದಲ್ಲಿನ ಎಲ್ಲಾ ಸಮುದಾಯದ ನಾಯಕರ ಸಹಿಯೊಂದಿಗೆ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಸಮ್ಮುಖದಲ್ಲಿ ಸಿಎಂ ಅವರನ್ನು ಭೇಟಿಯಾಗಿ ಕಾಂತರಾಜು ಜಾತಿಗಣತಿ ವರದಿ ತಿರಸ್ಕರಿಸಿ, ಬದಲಾಗಿ ನೂತನ ವೈಜ್ಞಾನಿಕ ಜಾತಿ ಗಣತಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ. ಈಗಿನ ಜಾತಿ ಗಣತಿಯಲ್ಲಿಯೇ ಹಲವಾರು ಲೋಪದೋಷಗಳು ಕಂಡುಬಂದಿವೆ. ಲಿಂಗಾಯತ ಸುಮುದಾಯದಲ್ಲಿ ಅನೇಕ ಮನೆಗಳ ಸರ್ವೆ ಆಗಿಲ್ಲ, ಆರಂಭಿಕ ಲೋಪದೋಷ ಇರುವ ವರದಿ ಸಲ್ಲಿಸಿದರೆ ಅದು ವೈಜ್ಞಾನಿಕವಾಗಿರಲಿದೆಯೇ ಎಂಬ ಪ್ರಶ್ನೆ ಮೂಡುತ್ತದೆ. ಅದರ ಜೊತೆಜೊತೆಗೆ ಮೂಲ ದಾಖಲಾತಿಗಳು ಕಾಣೆಯಾಗಿದೆ ಎಂದು ಕಂಡುಬರುತ್ತಿದೆ, ಸಹಿಯಾಗದ ದಾಖಲೆ, ಕೇವಲ ಡಾಟಾ ಮೂಲಕ ಜಾತಿ ಗಣತಿ ಮಾಡುವುದು ತಪ್ಪು. ಈಗಿರುವ ಜಾತಿ ಗಣತಿಯಲ್ಲಿ ಕೆಲವೊಂದು ದುರದ್ದೇಶಗಳು ಕಾಣುತ್ತಿದ್ದು, ಹೊಸ ಜಾತಿಗಣತಿ ನಡೆಸುವಂತೆ ವೀರಶೈವ ಲಿಂಗಾಯತ ಸಮುದಾಯ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…