ಬೆಂಗಳೂರು: ಆರ್ಸಿಬಿ ವಿಜಯೋತ್ಸವದಲ್ಲಿ ತಂಡವನ್ನು ಬರಮಾಡಿಕೊಂಡಿದ್ದಕ್ಕೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿರುವುದು ಬೆಳಕಿಗೆ ಬಂದಿದೆ.
ಸಚಿವ ಸಂಪುಟ ಸಭೆಯ ಬಳಿಕ ಕಾಲ್ತುಳಿತ ಪ್ರಕರಣ ಕುರಿತು ಚರ್ಚಿಸುವ ಸಲುವಾಗಿ ನಡೆದ ವಿಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪರಸ್ಪರ ಕಾವೇರಿದ ಮಾತುಕತೆಗಳು ನಡೆದಿವೆ ಎನ್ನಲಾಗಿದೆ.
ಘಟನೆಯಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಇದಕ್ಕಾಗಿ ಪೊಲೀಸ್ ಆಯುಕ್ತರೂ ಸೇರಿದಂತೆ ಹಿರಿಯ ಅಧಿಕಾರಿಗಳ ತಲೆದಂಡವಾಗಬೇಕು ಎಂದು ಶಿವಕುಮಾರ್ ಪಟ್ಟು ಹಿಡಿದಿದ್ದರು ಎನ್ನಲಾಗಿದೆ.
ಈ ವೇಳೆ ಸಿಟ್ಟಾದ ಮುಖ್ಯಮಂತ್ರಿಯವರು ಅಧಿಕಾರಿಗಳನ್ನು ಹೊಣೆ ಮಾಡುವುದು ಸುಲಭ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನೀವು ಭೇಟಿ ನೀಡಿದ್ದೇಕೆ? ಯಾವುದೇ ಮುನ್ಸೂಚನೆ ಇಲ್ಲದೆ ಪೂರ್ವ ನಿರ್ಧರಿತ ವೇಳಾಪಟ್ಟಿಯೂ ಇಲ್ಲದೆ ಸಾಂವಿಧಾನಿಕ ಹುದ್ದೆಯಲ್ಲಿರುವ ತಾವು ಏಕಾಏಕಿ ಆ ರೀತಿ ಜನಸಂದಣಿಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದೇಕೆ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ನೀವು ಅಲ್ಲಿಗೆ ಹೋಗಿ ಶೋ ಮಾಡಿದ್ದರಿಂದಾಗಿಯೇ ವಿರೋಧಪಕ್ಷಗಳು ಸರ್ಕಾರವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿವೆ. ವಿಧಾನಸೌಧದ ಮುಂದೆ ಯಾವುದೇ ಸಮಸ್ಯೆಗಳೂ ಆಗಿಲ್ಲ. ಗೊಂದಲಗಳೂ ಉಂಟಾಗಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಿದ್ದಾಗಲೂ ನೀವು ಅಲ್ಲಿಗೆ ಭೇಟಿ ನೀಡಿದ್ದರಿಂದ ಅದು ಸರ್ಕಾರದ ಕಾರ್ಯಕ್ರಮ ಎಂಬ ರೀತಿ ಬಿಂಬಿಸಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಚಿವರ ತಲೆದಂಡವಾಗಬೇಕು ಎಂದ ವಿರೋಧಪಕ್ಷಗಳು ಕೇಳುತ್ತಿವೆ. ಇದಕ್ಕೆ ನಾವು ಯಾವ ರೀತಿ ಉತ್ತರಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಗರಂ ಆಗಿದ್ದರು ಎನ್ನಲಾಗಿದೆ.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…