ರಾಜ್ಯ

ನೀವು ಯಾಕೆ ಹೋಗಿದ್ರಿ..? ಡಿಸಿಎಂ ಡಿಕೆಗೆ ಸಿಎಂ ಸಿದ್ದರಾಮಯ್ಯ ತರಾಟೆ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ತಂಡವನ್ನು ಬರಮಾಡಿಕೊಂಡಿದ್ದಕ್ಕೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿರುವುದು ಬೆಳಕಿಗೆ ಬಂದಿದೆ.

ಸಚಿವ ಸಂಪುಟ ಸಭೆಯ ಬಳಿಕ ಕಾಲ್ತುಳಿತ ಪ್ರಕರಣ ಕುರಿತು ಚರ್ಚಿಸುವ ಸಲುವಾಗಿ ನಡೆದ ವಿಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪರಸ್ಪರ ಕಾವೇರಿದ ಮಾತುಕತೆಗಳು ನಡೆದಿವೆ ಎನ್ನಲಾಗಿದೆ.
ಘಟನೆಯಿಂದಾಗಿ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಇದಕ್ಕಾಗಿ ಪೊಲೀಸ್ ಆಯುಕ್ತರೂ ಸೇರಿದಂತೆ ಹಿರಿಯ ಅಧಿಕಾರಿಗಳ ತಲೆದಂಡವಾಗಬೇಕು ಎಂದು ಶಿವಕುಮಾರ್ ಪಟ್ಟು ಹಿಡಿದಿದ್ದರು ಎನ್ನಲಾಗಿದೆ.

ಈ ವೇಳೆ ಸಿಟ್ಟಾದ ಮುಖ್ಯಮಂತ್ರಿಯವರು ಅಧಿಕಾರಿಗಳನ್ನು ಹೊಣೆ ಮಾಡುವುದು ಸುಲಭ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನೀವು ಭೇಟಿ ನೀಡಿದ್ದೇಕೆ? ಯಾವುದೇ ಮುನ್ಸೂಚನೆ ಇಲ್ಲದೆ ಪೂರ್ವ ನಿರ್ಧರಿತ ವೇಳಾಪಟ್ಟಿಯೂ ಇಲ್ಲದೆ ಸಾಂವಿಧಾನಿಕ ಹುದ್ದೆಯಲ್ಲಿರುವ ತಾವು ಏಕಾಏಕಿ ಆ ರೀತಿ ಜನಸಂದಣಿಯ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದೇಕೆ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನೀವು ಅಲ್ಲಿಗೆ ಹೋಗಿ ಶೋ ಮಾಡಿದ್ದರಿಂದಾಗಿಯೇ ವಿರೋಧಪಕ್ಷಗಳು ಸರ್ಕಾರವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿವೆ. ವಿಧಾನಸೌಧದ ಮುಂದೆ ಯಾವುದೇ ಸಮಸ್ಯೆಗಳೂ ಆಗಿಲ್ಲ. ಗೊಂದಲಗಳೂ ಉಂಟಾಗಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಿದ್ದಾಗಲೂ ನೀವು ಅಲ್ಲಿಗೆ ಭೇಟಿ ನೀಡಿದ್ದರಿಂದ ಅದು ಸರ್ಕಾರದ ಕಾರ್ಯಕ್ರಮ ಎಂಬ ರೀತಿ ಬಿಂಬಿಸಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಚಿವರ ತಲೆದಂಡವಾಗಬೇಕು ಎಂದ ವಿರೋಧಪಕ್ಷಗಳು ಕೇಳುತ್ತಿವೆ. ಇದಕ್ಕೆ ನಾವು ಯಾವ ರೀತಿ ಉತ್ತರಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಗರಂ ಆಗಿದ್ದರು ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

3 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

9 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

13 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

16 hours ago