Categories: ರಾಜ್ಯ

ಮದ್ಯಪ್ರಿಯರಿಗೆ ಗುಡ್‌ ನ್ಯೂಸ್‌ ಕೊಟ್ಟ ಅಬಕಾರಿ ಇಲಾಖೆ

ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸದ್ಯಕ್ಕೆ ಬಿಯರ್‌ ಬೆಲೆ ಹೆಚ್ಚಳ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಕೆಲ ದಿನಗಳಿಂದ ಬಿಯರ್‌ ಬೆಲೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಯರ್‌ ಬೆಲೆ ಶೀಘ್ರದಲ್ಲೇ ಪ್ರತಿ ಬಾಟಲಿಗೆ ಸುಮಾರು 10 ರಿಂದ 20 ರೂಪಾಯಿ ಹೆಚ್ಚಳವಾಗಲಿದೆ ಎನ್ನಲಾಗುತ್ತಿತ್ತು. ಆದರೆ ಸದ್ಯಕ್ಕೆ ಬಿಯರ್‌ ದರ ಪರಿಷ್ಕರಣೆ ನಿರ್ಧಾರವನ್ನು ರಾಜ್ಯ ಸರ್ಕಾರ ಮುಂದೂಡಿಕೆ ಮಾಡಿದೆ.

ಬಿಯರ್‌ ದರ ಹೆಚ್ಚಳ ಮಾಡಿದರೆ ಆದಾಯಕ್ಕೆ ತೀವ್ರ ಪೆಟ್ಟು ಬೀಳಬಹುದು ಎಂಬ ಉದ್ದೇಶಕ್ಕಾಗಿ ದರ ಏರಿಸದೇ ಇರಲು ಸರ್ಕಾರ ನಿರ್ಧಾರ ಮಾಡಿದೆ. ಬಲ್ಲ ಮೂಲಗಳ ಮಾಹಿತಿ ಪ್ರಕಾರ 2025ರ ಜನವರಿಯವರೆಗೂ ಬಿಯರ್‌ ದರ ಹೆಚ್ಚಳ ಮಾಡದೆ ಇರಲು ಅಬಕಾರಿ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ.

ಇನ್ನು ಇಯರ್‌ ಎಂಡ್‌ ಪಾರ್ಟಿ ಹಾಗೂ ಕ್ರಿಸ್‌ಮಸ್‌ ಹಬ್ಬದ ಹಿನ್ನೆಲೆಯಲ್ಲಿ ಈ ಬಾರಿಯೂ ಬಿಯರ್‌ಗೆ ಭಾರೀ ಬೇಡಿಕೆ ಬರುವ ಸಾಧ್ಯತೆಯಿದ್ದು, ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಬರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ

ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್‌ ಸ್ಪೆಷಾಲಿಟಿ…

24 mins ago

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌

ಬೆಂಗಳೂರು: ಮೈಸೂರು ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಪವಿತ್ರಾ ಎಂಬ…

59 mins ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸದ್ಯಕ್ಕೆ ಬಸ್‌ ಟಿಕೆಟ್‌ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

2 hours ago

ಹಾಸನ| ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ: ಸ್ಕೂಟರ್‌ನಿಂದ ಬಿದ್ದು ಯುವತಿ ಸಾವು

ಹಾಸನ: ರಸ್ತೆಯಲ್ಲಿ ಹಂಪ್ಸ್‌ ಕಾಣದೇ ದುರಂತ ಸಂಭವಿಸಿದ್ದು, ಸ್ಕೂಟರ್‌ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ…

2 hours ago

ಮಾನನಷ್ಟ ಪ್ರಕರಣಗಳಲ್ಲಿ ಮೂಗುತೂರಿಸುವ ಅಧಿಕಾರ ಪೊಲೀಸರಿಗಿಲ್ಲ!

ಪಿ.ಜೆ.ರಾಘವೇಂದ್ರ, ನ್ಯಾಯವಾದಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು ಹಿರಿಯ ಕೆಎಎಸ್ ಅಧಿಕಾರಿ ಹಾಗೂ ಮುಡಾ ಮಾಜಿ…

5 hours ago

ಸೌಂದರ್ಯ ಹದಗೆಡಿಸುವ ಫ್ಲೆಕ್ಸ್ ಹಾವಳಿ ತಡೆ ಅಗತ್ಯ

ದೇಶ-ವಿದೇಶಗಳ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಅರಮನೆ ನಗರಿ ಮೈಸೂರಿನ ಸೌಂದರ್ಯವನ್ನು ಹದಗೆಡಿಸುವಂತಹ ಜಾಹೀರಾತು ಫಲಕಗಳು, ಫ್ಲೆಕ್ಸ್‌ಗಳ ಹಾವಳಿ ತಡೆಗಟ್ಟಲು ರೂಪಿಸಿರುವ…

5 hours ago