ಬೆಂಗಳೂರು: ಮದ್ಯ ಪ್ರಿಯರಿಗೆ ಅಬಕಾರಿ ಇಲಾಖೆಯು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಸದ್ಯಕ್ಕೆ ಬಿಯರ್ ಬೆಲೆ ಹೆಚ್ಚಳ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಕೆಲ ದಿನಗಳಿಂದ ಬಿಯರ್ ಬೆಲೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಯರ್ ಬೆಲೆ ಶೀಘ್ರದಲ್ಲೇ ಪ್ರತಿ ಬಾಟಲಿಗೆ ಸುಮಾರು 10 ರಿಂದ 20 ರೂಪಾಯಿ ಹೆಚ್ಚಳವಾಗಲಿದೆ ಎನ್ನಲಾಗುತ್ತಿತ್ತು. ಆದರೆ ಸದ್ಯಕ್ಕೆ ಬಿಯರ್ ದರ ಪರಿಷ್ಕರಣೆ ನಿರ್ಧಾರವನ್ನು ರಾಜ್ಯ ಸರ್ಕಾರ ಮುಂದೂಡಿಕೆ ಮಾಡಿದೆ.
ಬಿಯರ್ ದರ ಹೆಚ್ಚಳ ಮಾಡಿದರೆ ಆದಾಯಕ್ಕೆ ತೀವ್ರ ಪೆಟ್ಟು ಬೀಳಬಹುದು ಎಂಬ ಉದ್ದೇಶಕ್ಕಾಗಿ ದರ ಏರಿಸದೇ ಇರಲು ಸರ್ಕಾರ ನಿರ್ಧಾರ ಮಾಡಿದೆ. ಬಲ್ಲ ಮೂಲಗಳ ಮಾಹಿತಿ ಪ್ರಕಾರ 2025ರ ಜನವರಿಯವರೆಗೂ ಬಿಯರ್ ದರ ಹೆಚ್ಚಳ ಮಾಡದೆ ಇರಲು ಅಬಕಾರಿ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ.
ಇನ್ನು ಇಯರ್ ಎಂಡ್ ಪಾರ್ಟಿ ಹಾಗೂ ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ಬಾರಿಯೂ ಬಿಯರ್ಗೆ ಭಾರೀ ಬೇಡಿಕೆ ಬರುವ ಸಾಧ್ಯತೆಯಿದ್ದು, ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಬರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನವದೆಹಲಿ : ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು…
ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…