ಬೆಂಗಳೂರು: ಶಿವಮೊಗ್ಗದ ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಯಿಂದ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ಇದೊಂದು ದುರದೃಷ್ಟಕರ ಘಟನೆ ಎಂದು ಶೋಕ ವ್ಯಕ್ತಪಡಿಸಿರುವ ಅವರು, ಈ ದುಃಖದ ಸಂದರ್ಭದಲ್ಲಿ ಮೃತ ವೈದ್ಯರ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ಪ್ರತಿಯೊಂದು ಜೀವವೂ ಅಮೂಲ್ಯ. ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತ ಯುವ ವೈದ್ಯೆಯ ಕುಟುಂಬದವರಿಗೆ ನಿಯಮಾನುಸಾರ ಕೂಡಲೇ ಪರಿಹಾರ ನೀಡುವಂತೆ ಸೂಚಿಸಿರುವ ಅವರು, ರಾಜ್ಯದ ಎಲ್ಲ ಮೃಗಾಲಯಗಳಲ್ಲಿರುವ ಪಶುವೈದ್ಯರು ಯಾವುದೇ ವನ್ಯಜೀವಿಗೆ ಚಿಕಿತ್ಸೆ ನೀಡುವಾಗ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ಪಾಲಿಸಬೇಕು ಎಂದೂ ಸ್ಪಷ್ಟ ಸೂಚನೆ ನೀಡಿದ್ದಾರೆ.
ಈ ದುರಂತದ ಬಗ್ಗೆ ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡದಿಂದ ತನಿಖೆ ಮಾಡಿಸಿ, 7 ದಿನಗಳ ಒಳಗಾಗಿ ವರದಿ ನೀಡುವಂತೆಯೂ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಇತ್ತೀಚೆಗಷ್ಟೇ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ಡಾ ಸಮೀಕ್ಷಾ ರೆಡ್ಡಿ ಅವರು ಗುರುವಾರ 11.30ರ ಸಮಯದಲ್ಲಿ ವನ್ಯಜೀವಿಯೊಂದಕ್ಕೆ ಚಿಕಿತ್ಸೆ ನೀಡಲು ತೆರಳಿದ್ದಾಗ, ನೀರಾನೆ ದಾಳಿಯಿಂದ ಗಾಯಗೊಂಡಿದ್ದರು. ಅವರನ್ನು ಕೂಡಲೇ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ 6.30ರ ಸುಮಾರಿನಲ್ಲಿ ಅವರು ಕೊನೆಯುಸಿರೆಳೆದರು ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…