ರಾಜ್ಯ

ಉಪ ರಾಷ್ಟ್ರಪತಿ ರಾಧಾಕೃಷ್ಣನ್‌ ನಾಳೆ ಕರ್ನಾಟಕಕ್ಕೆ ಮೊದಲ ಭೇಟಿ

ಬೆಂಗಳೂರು : ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಅಧಿಕಾರ ವಹಿಸಿಕೊಂಡ ನಂತರ ನ.9 ರಂದು ಕರ್ನಾಟಕಕ್ಕೆ ಮೊದಲ ಭೇಟಿ ನೀಡಲಿದ್ದಾರೆ.

ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳದಲ್ಲಿ 4ನೇ ಬೆಟ್ಟದ ಪದನಾಮ ಅನಾವರಣ ಹಾಗೂ ಆಚಾರ್ಯ ಶ್ರೀ 108ನೇ ಶಾಂತಿಸಾಗರ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನಾ ಮಹೋತ್ಸವ ಜರುಗಲಿದೆ. ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ.

ಇದನ್ನು ಓದಿ: ಗ್ರೇಟರ್‌ ಮೈಸೂರು ಯೋಜನೆ ನಿರ್ಮಾಣಕ್ಕೆ ಆಕ್ಷೇಪ

ಮೈಸೂರಿನಲ್ಲಿರುವ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಹದಿನಾರನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪದವಿ ಪಡೆದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕರ್ನಾಟಕದ ಪ್ರಮುಖ ಮಠಗಳಲ್ಲಿ ಒಂದಾದ ಸುತ್ತೂರು ಮಠದ ಹಳೆಯ ಆವರಣಕ್ಕೂ ಉಪರಾಷ್ಟ್ರಪತಿ ಅವರು ಭೇಟಿ ನೀಡಲಿದ್ದಾರೆ. ಅವರು ಮೈಸೂರಿನ ಬಳಿಯ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನ ಮತ್ತು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿರುವ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಳೆ ಬೆಳಗ್ಗೆ 8:45 ಕ್ಕೆ ಶ್ರವಣಬೆಳಗೊಳದ ಹೆಲಿಪ್ಯಾಡ್‌ಗೆ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಆಗಮಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಸಚಿವ ಡಿ.ಸುಧಾಕರ್, ಸಂಸದ ಶ್ರೇಯಸ್ ಪಟೇಲ್, ಸ್ಥಳೀಯ ಶಾಸಕ ಸಿ.ಎನ್.ಬಾಲಕೃಷ್ಣ ಸ್ವಾಗತಿಸಲಿದ್ದಾರೆ.

ಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರು ಬೆಳಗ್ಗೆ 9:05 ಕ್ಕೆ ಬೆಟ್ಟದ ನಾಮಕರಣ ಮತ್ತು ವಿಗ್ರಹ ಅನಾವರಣ ಮಾಡಲಿದ್ದಾರೆ. 10:15 ಕ್ಕೆ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಲಿದ್ದಾರೆ. ಹದಿನೈದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮಾನವ ರಹಿತ ಏರ್‌ಕ್ರಾಫ್ಟ್ ಹಾಗೂ ಏರ್ ಬಲೂನ್ ಬಳಕೆ, ಹಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದು, ಈಗಾಗಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

4 mins ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

26 mins ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

48 mins ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

2 hours ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

2 hours ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

2 hours ago