ರಾಜ್ಯ

ಸೂರಜ್‌ ಆಪ್ತ ಶಿವಕುಮಾರ್‌ ವಿರುದ್ಧ 2 ಕೋಟಿ ಆಮಿಷದ ದೂರು ದಾಖಲಿಸಿದ ಸಂತ್ರಸ್ತ

ಬೆಂಗಳೂರು: ಯುವಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣನ ಆಪ್ತ ಸಹಾಯಕ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ.

ತನ್ನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಎಲ್ಲಾ ವಿಷಯವನ್ನು ಸೂರಜ್‌ ಆಪ್ತ ಶಿವಕುಮಾರ್‌ ಬಳಿ ಹೇಳಿದ್ದೆ. ಆತ ನನ್ನನ್ನು ಕೂಡಿಹಾಕಿ 2 ಕೋಟಿ ರೂ. ಆಮಿಷ ಹಾಗೂ ಉದ್ಯೋಗ ಕೊಡಿಸುವುದಾಗಿ ಹೇಳಿದ್ದ. ಹಾಗೂ ಈ ವಿಷಯವನ್ನು ಯಾರಿಗಾದರೂ ಹೇಳಿದ್ದೆ ಆದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆಯನ್ನು ಸಹಾ ಹಾಕಿದ್ದ ಎಂದು ಸಂತ್ರಸ್ತ ಶಿವಕುಮಾರ್‌ ವಿರುದ್ಧ ದೂರು ದಾಖಲಿಸಿದ್ದಾನೆ.

ಸಂತ್ರಸ್ತ ನೀಡಿದ ದೂರನಿಲ್ಲೇನಿದೆ?: ಸೂರಜ್‌ ರೇವಣ್ಣರಿಂದ ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರು, ನನ್ನನ್ನು ಆಸ್ಪತ್ರೆಗೆ ಬಿಡದೇ ಕೊಠಡಯೊಂದರಲ್ಲಿ ಶಿವಕುಮಾರ್‌ ಕೂಡಿ ಹಾಕಿದ್ದನು. ನನ್ನ ಬಳಿಯಿಂದಲೇ 1000 ರೂ. ಹಣಪಡೆದು ಊಟ ಕೊಡಿಸಿ ಬಳಿಕ ಸೂರಜ್‌ ರೇವಣ್ಣ ಜತೆ ಮಾತನಾಡಿಸಿದರು. ಅವರು ನನಗೆ 2 ಕೋಟಿ ಹಣ ಹಾಗೂ ಉದ್ಯೋಗ ನೀಡುವ ಭರವಸೆಯನ್ನು ನೀಡಿದರು. ಆದರೆ ನಾನು ಒಪ್ಪದಿದ್ದಾಗ ನಿನ್ನನ್ನು ಮುಗಿಸುವೇ ಎಂದು ಗದರಿಸಿದ್ದರು ಎಂದು ಹೇಳಿದರು

ನನ್ನನ್ನು ಮನೆಗೆ ಕಳುಹಿಸದೇ ಲಾಡ್ಜ್‌ನಲ್ಲಿ ಕೂಡಿಹಾಕಿದ್ದ ಸೂರಜ್‌ ಆಪ್ತ ಶಿವಕುಮಾರ್‌ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಅಳಲು ತೋಡಿಕೊಂಡಿದ್ದಾನೆ.

ಆಂದೋಲನ ಡೆಸ್ಕ್

Recent Posts

ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…

59 mins ago

ನನಗೂ ಎಂಎಲ್‌ಸಿ ಸ್ಥಾನ ಕೊಡಿ : ರಕ್ತದಲ್ಲಿ ಸಹಿ ಹಾಕಿ ವರಿಷ್ಠರಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತ

ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…

1 hour ago

ಓದುಗರ ಪತ್ರ:  ದೇವಾಲಯಗಳ ಬಳಿ ಪೊಲೀಸ್ ಗಸ್ತು ಹೆಚ್ಚಿಸಿ

ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…

4 hours ago

ನಂಜನಗೂಡು | ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ ; 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿ

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…

4 hours ago

ಓದುಗರ ಪತ್ರ: ಸಬ್ ಅರ್ಬನ್ ಬಸ್ ನಿಲ್ದಾಣದ ಬಳಿ ಆಟೋ ಸಂಚಾರ ನಿಯಂತ್ರಿಸಿ

ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…

4 hours ago