ಬೆಂಗಳೂರು: ಯುವಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನ ಆಪ್ತ ಸಹಾಯಕ ಶಿವಕುಮಾರ್ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ.
ತನ್ನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಎಲ್ಲಾ ವಿಷಯವನ್ನು ಸೂರಜ್ ಆಪ್ತ ಶಿವಕುಮಾರ್ ಬಳಿ ಹೇಳಿದ್ದೆ. ಆತ ನನ್ನನ್ನು ಕೂಡಿಹಾಕಿ 2 ಕೋಟಿ ರೂ. ಆಮಿಷ ಹಾಗೂ ಉದ್ಯೋಗ ಕೊಡಿಸುವುದಾಗಿ ಹೇಳಿದ್ದ. ಹಾಗೂ ಈ ವಿಷಯವನ್ನು ಯಾರಿಗಾದರೂ ಹೇಳಿದ್ದೆ ಆದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆಯನ್ನು ಸಹಾ ಹಾಕಿದ್ದ ಎಂದು ಸಂತ್ರಸ್ತ ಶಿವಕುಮಾರ್ ವಿರುದ್ಧ ದೂರು ದಾಖಲಿಸಿದ್ದಾನೆ.
ಸಂತ್ರಸ್ತ ನೀಡಿದ ದೂರನಿಲ್ಲೇನಿದೆ?: ಸೂರಜ್ ರೇವಣ್ಣರಿಂದ ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರು, ನನ್ನನ್ನು ಆಸ್ಪತ್ರೆಗೆ ಬಿಡದೇ ಕೊಠಡಯೊಂದರಲ್ಲಿ ಶಿವಕುಮಾರ್ ಕೂಡಿ ಹಾಕಿದ್ದನು. ನನ್ನ ಬಳಿಯಿಂದಲೇ 1000 ರೂ. ಹಣಪಡೆದು ಊಟ ಕೊಡಿಸಿ ಬಳಿಕ ಸೂರಜ್ ರೇವಣ್ಣ ಜತೆ ಮಾತನಾಡಿಸಿದರು. ಅವರು ನನಗೆ 2 ಕೋಟಿ ಹಣ ಹಾಗೂ ಉದ್ಯೋಗ ನೀಡುವ ಭರವಸೆಯನ್ನು ನೀಡಿದರು. ಆದರೆ ನಾನು ಒಪ್ಪದಿದ್ದಾಗ ನಿನ್ನನ್ನು ಮುಗಿಸುವೇ ಎಂದು ಗದರಿಸಿದ್ದರು ಎಂದು ಹೇಳಿದರು
ನನ್ನನ್ನು ಮನೆಗೆ ಕಳುಹಿಸದೇ ಲಾಡ್ಜ್ನಲ್ಲಿ ಕೂಡಿಹಾಕಿದ್ದ ಸೂರಜ್ ಆಪ್ತ ಶಿವಕುಮಾರ್ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಅಳಲು ತೋಡಿಕೊಂಡಿದ್ದಾನೆ.
ಮೈಸೂರು: ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್ ಮಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ…
ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…