ರಾಜ್ಯ

ಸೂರಜ್‌ ಆಪ್ತ ಶಿವಕುಮಾರ್‌ ವಿರುದ್ಧ 2 ಕೋಟಿ ಆಮಿಷದ ದೂರು ದಾಖಲಿಸಿದ ಸಂತ್ರಸ್ತ

ಬೆಂಗಳೂರು: ಯುವಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಹಾಸನದ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣನ ಆಪ್ತ ಸಹಾಯಕ ಶಿವಕುಮಾರ್‌ ವಿರುದ್ಧವೂ ಸಂತ್ರಸ್ತ ದೂರು ದಾಖಲಿಸಿದ್ದಾರೆ.

ತನ್ನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕುರಿತು ಎಲ್ಲಾ ವಿಷಯವನ್ನು ಸೂರಜ್‌ ಆಪ್ತ ಶಿವಕುಮಾರ್‌ ಬಳಿ ಹೇಳಿದ್ದೆ. ಆತ ನನ್ನನ್ನು ಕೂಡಿಹಾಕಿ 2 ಕೋಟಿ ರೂ. ಆಮಿಷ ಹಾಗೂ ಉದ್ಯೋಗ ಕೊಡಿಸುವುದಾಗಿ ಹೇಳಿದ್ದ. ಹಾಗೂ ಈ ವಿಷಯವನ್ನು ಯಾರಿಗಾದರೂ ಹೇಳಿದ್ದೆ ಆದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆಯನ್ನು ಸಹಾ ಹಾಕಿದ್ದ ಎಂದು ಸಂತ್ರಸ್ತ ಶಿವಕುಮಾರ್‌ ವಿರುದ್ಧ ದೂರು ದಾಖಲಿಸಿದ್ದಾನೆ.

ಸಂತ್ರಸ್ತ ನೀಡಿದ ದೂರನಿಲ್ಲೇನಿದೆ?: ಸೂರಜ್‌ ರೇವಣ್ಣರಿಂದ ಅಸಹಜ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರು, ನನ್ನನ್ನು ಆಸ್ಪತ್ರೆಗೆ ಬಿಡದೇ ಕೊಠಡಯೊಂದರಲ್ಲಿ ಶಿವಕುಮಾರ್‌ ಕೂಡಿ ಹಾಕಿದ್ದನು. ನನ್ನ ಬಳಿಯಿಂದಲೇ 1000 ರೂ. ಹಣಪಡೆದು ಊಟ ಕೊಡಿಸಿ ಬಳಿಕ ಸೂರಜ್‌ ರೇವಣ್ಣ ಜತೆ ಮಾತನಾಡಿಸಿದರು. ಅವರು ನನಗೆ 2 ಕೋಟಿ ಹಣ ಹಾಗೂ ಉದ್ಯೋಗ ನೀಡುವ ಭರವಸೆಯನ್ನು ನೀಡಿದರು. ಆದರೆ ನಾನು ಒಪ್ಪದಿದ್ದಾಗ ನಿನ್ನನ್ನು ಮುಗಿಸುವೇ ಎಂದು ಗದರಿಸಿದ್ದರು ಎಂದು ಹೇಳಿದರು

ನನ್ನನ್ನು ಮನೆಗೆ ಕಳುಹಿಸದೇ ಲಾಡ್ಜ್‌ನಲ್ಲಿ ಕೂಡಿಹಾಕಿದ್ದ ಸೂರಜ್‌ ಆಪ್ತ ಶಿವಕುಮಾರ್‌ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಅಳಲು ತೋಡಿಕೊಂಡಿದ್ದಾನೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

2 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

6 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

6 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

6 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

6 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

6 hours ago