Stop Tug-of-War Over Leadership Debate; Focus on Development Instead
ಬೆಂಗಳೂರು: ದೇವನಹಳ್ಳಿ ರೈತರ ಹೋರಾಟಕ್ಕೆ ಅತಿದೊಡ್ಡ ಜಯ ಸಿಕ್ಕಿದ್ದು, ಭೂಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ವಿಧಾನಸೌಧದಲ್ಲಿ ರೈತರ ಜೊತೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ಈ ಮೂಲಕ ಕೊನೆಗೂ ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದು, ರಾಜ್ಯ ಸರ್ಕಾರ ರೈತರ ಹೋರಾಟಕ್ಕೆ ಮಣಿದಿದೆ.
ಭೂಮಾಲೀಕರು ಸ್ವಯಂಪ್ರೇರಿತವಾಗಿ ಜಮೀನು ನೀಡಲು ಮುಂದಾದರೆ ಮಾತ್ರ ಅವರಿಂದ ಖರೀದಿಸಿ, ಬಲವಂತವಾಗಿ ಜಮೀನು ಪಡೆದುಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ರೈತರು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಾ ಬಂದಿದ್ದರು. ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನ ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಇತ್ತೀಚೆಗೆ ರೈತರು ತಾವೇ ಬೆಳೆದ ತರಕಾರಿ, ಹೂವು, ಹಣ್ಣುಗಳ ಬುಟ್ಟಿ ಸಮೇತ ವಿಧಾನಸೌಧಕ್ಕೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತರ ಜಮೀನು ಸ್ವಾಧೀನ ಪಡಿಸಿಕೊಳ್ಳದಂತೆ ಮನವಿ ಮಾಡಿದ್ದರು.
ಈಗ ಸಿಎಂ ಸಿದ್ದರಾಮಯ್ಯ ಅವರು ರೈತರ ಮನವಿಗೆ ಸ್ಪಂದಿಸಿದ್ದು, ಭೂಸ್ವಾಧೀನ ಕೈಬಿಡಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ರೈತರು ಜೈಕಾರ ಹಾಕಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…