ಬೆಂಗಳೂರು: ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು(ಜೂ.21) ವಿವಿಧ ರಾಜ್ಯಗಳ ಕೃಷಿ ಸಚಿವರೊಂದಿಗೆ ಮುಂಗಾರು ಹಾಗೂ ಕೃಷಿ ಸಂಬಂಧಿತ ವಿಡಿಯೋ ಸಂವಾದ ನಡೆಸಿದರು. ಸಂವಾದದಲ್ಲಿ ಪಾಲ್ಗೊಂಡ ರಾಜ್ಯ ಕೃಷಿ ಸಚಿವ ಎನ್ . ಚಲುವರಾಯ ಸ್ವಾಮಿ ರಾಜ್ಯದ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.
ಇದೇ ವೇಳೆ ಅವರು ರಾಜ್ಯದ ಮಳೆ ಬೆಳೆ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಕರ್ನಾಟಕವು ದೇಶದ ದ್ವಿದಳ ಧಾನ್ಯ ಬೆಳೆಯ ಶೇ 11 ರಷ್ಟು ಭೂ ಪ್ರದೇಶ ಮತ್ತು ಶೇ 8 ರಷ್ಟು ಉತ್ಪಾದನೆ ಹೊಂದಿದೆ. ರಾಜ್ಯದ 31.6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 19.83 ಲಕ್ಷ ಟನ್ ದ್ವಿದಳ ಧಾನ್ಯ ಬೆಳೆಯಲಾಗುತ್ತಿದೆ ಎಂದು ಎನ್ .ಚಲುವರಾಯಸ್ವಾಮಿ ಅವರು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ತೊಗರಿ ಬೇಳೆ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ 2ನೇ ಸ್ಥಾನದಲ್ಲಿದ್ದು ಶೇ 31 ರಷ್ಟು ಕೊಡುಗೆ ನೀಡುತ್ತಿದೆ ಎಂದು ಅವರು ವಿವರಿಸಿದರು.
ಕರ್ನಾಟಕ ರಾಜ್ಯದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಎರಡನ್ನೂ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿ ಅನುಷ್ಠಾನಗೊಳಿಸುತ್ತಿದ್ದು ಇದರಿಂದ ಬೇಳೆ ಕಾಳುಗಳ ಆಮದು ಅವಲಂಬನೆ ತಪ್ಪಿಸಲು ಸಹಾಯಕವಾಗುತ್ತದೆ ಎಂದು ರಾಜ್ಯ ಕೃಷಿ ಸಚಿವರು ಕೇಂದ್ರಕ್ಕೆ ಮನವರಿಕೆ ಮಾಡಿಕೊಟ್ಟರು.
ಪ್ರಸಕ್ತ ವರ್ಷ 2024-25 ತೊಗರಿ ಬೇಳೆ ಉತ್ಪಾದನೆ ಪ್ರದೇಶವನ್ನು 2 ಲಕ್ಷ ಹೆಕ್ಟೇರ್ ನಷ್ಟು ಹೆಚ್ಚಳ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಅವರು ಹೇಳಿದರು.
ರಾಜ್ಯದ 64.2 ಕೋಟಿ ರೂ ಮೊತ್ತದ ಬೇಳೆ ಕಾಳು ಅಭಿವೃದ್ಧಿಯ ಹೆಚ್ಚುವರಿ ಯೋಜನೆಗೆ ಅನುಮೋದನೆ ನೀಡಿರುವ ಕೇಂದ್ರ ಕೃಷಿ ಸಚಿವರಿಗೆ ವಿಶೇಷ ಧನ್ಯವಾದ ಸಮರ್ಪಿಸಿದ ಅವರು ಶೀಘ್ರದಲ್ಲೇ ವೈಯಕ್ತಿಕವಾಗಿ ಬೇಟಿ ಮಾಡುವುದಾಗಿ ತಿಳಿಸಿ, ಮುಂದೆಯೂ ನಿರಂತರ ಸಹಕಾರಕ್ಕೆ ಮನವಿ ಮಾಡಿದರು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…