ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ಮೋಜು-ಮಸ್ತಿ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತ ಧನ್ವೀರ್ ಇಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದ ನಟ ಧನ್ವೀರ್ ಅವರಿಗೆ ಪೊಲೀಸರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ ಎಂದು ತಿಳಿದುಬಂದಿದೆ.
ವಿಚಾರಣೆ ಬಳಿಕ ಧನ್ವೀರ್ಗೆ ಮತ್ತೆ ಮುಂದಿನ ವಾರವೂ ವಿಚಾರಣೆಗೆ ಬರುವಂತೆ ಪೊಲೀಸರು ಸೂಚಿಸಿದ್ದಾರೆ.





